ಸೈಲೆಂಟ್ ಸುನೀಲ್ ಏರ್ಪಡಿಸಿದ್ದ ರಕ್ತದಾನ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕ ಉದಯ ಗರುಡಾಚಾರ್ ಭಾಗವಹಿಸಿದ್ದರು. ಸಚಿವ ವಿ.ಸೋಮಣ್ಣ ಅವರನ್ನು ರೌಡಿ ಪಟ್ಟಿಯಲ್ಲಿ ಹೆಸರಿದ್ದ ವಿಲ್ಸನ್ ಗಾರ್ಡನ್ ನಾಗ ಭೇಟಿ ಮಾಡಿದ್ದ. ಮಂಡ್ಯದ ಫೈಟರ್ ರವಿಯನ್ನು ಬಿಜೆಪಿಗೆ ಸೇರಿಸಿಕೊಂಡಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.