ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐವರು ರೌಡಿ ಶೀಟರ್‌ಗಳ ಬಂಧನ: ಮಾರಕಾಸ್ತ್ರ ವಶ

Last Updated 19 ಜೂನ್ 2020, 22:19 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕಾಸ್ತ್ರ ಹಿಡಿದು ಡಕಾಯಿತಿಗೆ ಹೊಂಚು ಹಾಕುತ್ತಿದ್ದ ಐವರು ರೌಡಿ ಶೀಟರ್‌ಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸಂಘಟಿತ ಅಪರಾಧ ತಡೆ ವಿಭಾಗದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆರೋಪಿಗಳಿಂದ ಕಬ್ಬಿಣದ ರಾಡು, ಚಾಕು, ದೊಣ್ಣೆ ಹಾಗೂ ಖಾರದಪುಡಿ ಪೊಟ್ಟಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಚ್‌ಎಎಲ್‌ ಠಾಣೆ ವ್ಯಾಪ್ತಿಯಲ್ಲಿ ದಾರಿಹೋಕರನ್ನು ಅಡ್ಡಹಾಕಿ, ನಗದು– ನಾಣ್ಯ ದೋಚಲು ಕಾದಿದ್ದಾಗ ಬಂಧಿಸಲಾಗಿದೆ.

ಸಾರಾಯಿಪಾಳ್ಯದ ಸಾದಿಕ್‌ ಅಲಿಯಾಸ್‌ ಸುಗ್ಗು (30), ಮಹಮ್ಮದ್‌ ಇಮ್ರಾನ್‌ ಅಲಿಯಾಸ್‌ ಲಾರಿ ಇಮ್ರಾನ್‌ (28), ಮುಬಾರಕ್‌ ಅಲಿಯಾಸ್‌ ಬಾಲಿ (35), ಎಚ್‌‌ಬಿಆರ್‌ ಬಡಾವಣೆಯ ಸೈಯದ್‌ ಹನೀಫ್‌ ಅಲಿಯಾಸ್‌ ಡಾನ್‌ (25) ಹಾಗೂ ಅಕ್ರಮ್‌ ಪಾಷಾ (29) ಬಂಧಿತರು.

ಸಾದಿಕ್‌, ಮುಬಾರಕ್‌, ಸೈಯದ್‌‌ ಹನೀಫ್‌ ಸಂಪಿಗೆಹಳ್ಳಿ ಠಾಣೆ ರೌಡಿಶೀಟರ್‌ ಆಗಿದ್ದು,‌ ವಿವಿಧ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ 20 ಪ್ರಕರಣಗಳಿವೆ. ಹನೀಫ್‌ ವಿರುದ್ಧವೂ ಕೊಲೆ ಯತ್ನ, ಹಲ್ಲೆ ಆರೋಪಗಳಿವೆ.

ಇಮ್ರಾನ್‌ ನೆಲಮಂಗಲ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣವೊಂದರ ಆರೋಪಿ. ಅಕ್ರಮ್‌ ಪಾಷಾ ವಿರುದ್ಧವೂ ಸಂಪಿಗೆಹಳ್ಳಿ ಠಾಣೆಯಲ್ಲಿ ದರೋಡೆ ಯತ್ನದ ಪ್ರಕರಣ ಇದೆ. ಆರೋಪಿಗಳ ಬಂಧನದಿಂದ ಎಚ್‌ಎಎಲ್‌ ಠಾಣೆ ವ್ಯಾಪ್ತಿಯ ದರೋಡೆ ಪ್ರಕರಣ ಮತ್ತು ಬಾಣಸವಾಡಿ ಠಾಣೆ ವ್ಯಾಪ್ತಿಯ ಬೈಕ್‌ ಕಳವು ಪ್ರಕರಣ ಪತ್ತೆಯಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT