‘ಹೊಸಕೆರೆಹಳ್ಳಿಯ ಕೆರೆ ಪ್ರದೇಶದಲ್ಲಿ ಆರೋಪಿ ಕಾಣಿಸಿಕೊಂಡಿದ್ದ. ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಹೋಗಿದ್ದ ಪೊಲೀಸರ ತಂಡ, ರೌಡಿಯನ್ನು ಬಂಧಿಸಲು ಮುಂದಾಗಿತ್ತು. ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆತ ಕಾನ್ಸ್ಟೆಬಲ್ ಮೋಹನ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ. ಕಾನ್ಸ್ಟೆಬಲ್ ಅವರ ರಕ್ಷಣೆಗೆ ಧಾವಿಸಿದ ಸಬ್ ಇನ್ಸ್ಪೆಕ್ಟರ್ ಸುನೀಲ್, ರೌಡಿ ಕಾಲಿಗೆ ಗುಂಡು ಹೊಡೆದಿದ್ದರು’ ಎಂದುಮಾಹಿತಿ ನೀಡಿದರು.