<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ರೌಡಿ ಶೀಟರ್ಗಳು ಎಂಟು ತಿಂಗಳ ಅವಧಿಯಲ್ಲಿ ಜೈಲಿನಲ್ಲೇ ಕುಳಿತು ಎರಡು ಕೊಲೆಗಳಿಗೆ ಸಂಚು ರೂಪಿಸಿದ್ದು ಮತ್ತು ಹಣ ನೀಡುವಂತೆ ಬೆದರಿಕೆ ಕರೆ ಮಾಡಿರುವ ಬಗ್ಗೆ 'ಪ್ರಜಾವಾಣಿ'ಗೆ ದಾಖಲೆ ಲಭ್ಯವಾಗಿದೆ.</p>.<p>ಆರೋಪಿಗಳು ಈ ಕೃತ್ಯವೆಸಗಲು ಮೊಬೈಲ್ ಫೋನ್ ಬಳಸಿದ್ದಾರೆ. ಕೊಲೆ ಪ್ರಕರಣದಲ್ಲಿ ರೌಡಿಗಳು ಇನ್ಸ್ಟಾಗ್ರಾಂನಲ್ಲಿ ಸಂದೇಶ ಕಳುಹಿಸಿರುವುದು ಮತ್ತು ಇಂಟರ್ನೆಟ್ ಕರೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಎರಡು ಪ್ರಕರಣಗಳಲ್ಲಿ ರೌಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಕಾರಾಗೃಹ ಪರಿಶೀಲನೆಗಾಗಿ ಶನಿವಾರ (ಆಗಸ್ಟ್ 24) ಹೋಗಿದ್ದ ಸಿಸಿಬಿ ಅಧಿಕಾರಿಗಳು, ಸಿಬ್ಬಂದಿಯನ್ನು ಅರ್ಧ ಗಂಟೆ ಹೊರಗಡೆ ಕಾಯಿಸಲಾಗಿತ್ತು. ಆ ಸಂದರ್ಭದಲ್ಲೇ ಜೈಲು ಸಿಬ್ಬಂದಿ ವಸ್ತುಗಳನ್ನು ಸಾಗಿಸಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.</p>.<p>ಕಳೆದ ಏಪ್ರಿಲ್ನಲ್ಲಿ ಜೈಲು ಅಧಿಕಾರಿಗಳು ಇಬ್ಬರು ಕೈದಿಗಳಿಂದ ₹10,000 ನಗದು ಮತ್ತು ಉಕ್ಕಿನ ಮೂರು ಚಾಕುಗಳನ್ನು ವಶಪಡಿಸಿಕೊಂಡಿದ್ದರು. ಮಾದಕವಸ್ತು ಮತ್ತು ಮೊಬೈಲ್ ಫೋನ್ ಕಳ್ಳಸಾಗಣೆ ಮಾಡುವ ಪ್ರಯತ್ನಗಳನ್ನು ಜೈಲು ಅಧಿಕಾರಿಗಳು ಈ ವರ್ಷ ಎರಡು ಬಾರಿ ವಿಫಲಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ರೌಡಿ ಶೀಟರ್ಗಳು ಎಂಟು ತಿಂಗಳ ಅವಧಿಯಲ್ಲಿ ಜೈಲಿನಲ್ಲೇ ಕುಳಿತು ಎರಡು ಕೊಲೆಗಳಿಗೆ ಸಂಚು ರೂಪಿಸಿದ್ದು ಮತ್ತು ಹಣ ನೀಡುವಂತೆ ಬೆದರಿಕೆ ಕರೆ ಮಾಡಿರುವ ಬಗ್ಗೆ 'ಪ್ರಜಾವಾಣಿ'ಗೆ ದಾಖಲೆ ಲಭ್ಯವಾಗಿದೆ.</p>.<p>ಆರೋಪಿಗಳು ಈ ಕೃತ್ಯವೆಸಗಲು ಮೊಬೈಲ್ ಫೋನ್ ಬಳಸಿದ್ದಾರೆ. ಕೊಲೆ ಪ್ರಕರಣದಲ್ಲಿ ರೌಡಿಗಳು ಇನ್ಸ್ಟಾಗ್ರಾಂನಲ್ಲಿ ಸಂದೇಶ ಕಳುಹಿಸಿರುವುದು ಮತ್ತು ಇಂಟರ್ನೆಟ್ ಕರೆ ಮಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಎರಡು ಪ್ರಕರಣಗಳಲ್ಲಿ ರೌಡಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<p>ಕಾರಾಗೃಹ ಪರಿಶೀಲನೆಗಾಗಿ ಶನಿವಾರ (ಆಗಸ್ಟ್ 24) ಹೋಗಿದ್ದ ಸಿಸಿಬಿ ಅಧಿಕಾರಿಗಳು, ಸಿಬ್ಬಂದಿಯನ್ನು ಅರ್ಧ ಗಂಟೆ ಹೊರಗಡೆ ಕಾಯಿಸಲಾಗಿತ್ತು. ಆ ಸಂದರ್ಭದಲ್ಲೇ ಜೈಲು ಸಿಬ್ಬಂದಿ ವಸ್ತುಗಳನ್ನು ಸಾಗಿಸಿದ್ದಾರೆ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.</p>.<p>ಕಳೆದ ಏಪ್ರಿಲ್ನಲ್ಲಿ ಜೈಲು ಅಧಿಕಾರಿಗಳು ಇಬ್ಬರು ಕೈದಿಗಳಿಂದ ₹10,000 ನಗದು ಮತ್ತು ಉಕ್ಕಿನ ಮೂರು ಚಾಕುಗಳನ್ನು ವಶಪಡಿಸಿಕೊಂಡಿದ್ದರು. ಮಾದಕವಸ್ತು ಮತ್ತು ಮೊಬೈಲ್ ಫೋನ್ ಕಳ್ಳಸಾಗಣೆ ಮಾಡುವ ಪ್ರಯತ್ನಗಳನ್ನು ಜೈಲು ಅಧಿಕಾರಿಗಳು ಈ ವರ್ಷ ಎರಡು ಬಾರಿ ವಿಫಲಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>