<p><strong>ರಾಜರಾಜೇಶ್ವರಿ ನಗರ:</strong> ‘ವೈಜ್ಞಾನಿಕ ರೀತಿಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು. ಮುಖ್ಯರಸ್ತೆಗಳಲ್ಲಿ ಎಲ್ಲಿಯೂ ಗುಂಡಿಗಳು ಕಾಣಬಾರದು’ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ. ಲೋಕೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ರಸ್ತೆಯಲ್ಲಿ ಹರಿದು ಗುಂಡಿ ಉಂಟಾಗುತ್ತದೆ. ಒಳಚರಂಡಿ ದುರಸ್ತಿ ಮಾಡಬೇಕು’ ಎಂದು ಹೇಳಿದರು.</p>.<p>‘ಖಾಲಿ ನಿವೇಶನಗಳಲ್ಲಿ ಕಸ ಇರುವುದು ಕಂಡುಬಂದರೆ ಅದರ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಹಾಗೂ ಪೊಲೀಸ್ ಕೇಸು ದಾಖಲು ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಆಸ್ತಿ ಮತ್ತು ಕಟ್ಟಡ ತೆರಿಗೆಯಲ್ಲಿ ಲೋಪಗಳಿದ್ದರೆ ಸ್ಥಳದಲ್ಲಿಯೇ ಪರಿಹರಿಸಬೇಕು. ತಪ್ಪು ಕಂಡು ಬಂದರೆ ಪುನರ್ ಅರ್ಜಿ ಪಡೆದು ಜಾಗ ಗುರುತಿಸಿ ಕಂದಾಯ ನಿಗದಿಪಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕೆಂಗೇರಿ ಸಹಾಯಕ ಕಂದಾಯ ಅಧಿಕಾರಿ ಸಂತೋಷ್ಕುಮಾರ್, ‘ಬಿಡಿಎ ವತಿಯಿಂದ ಕೆಲವು ಬಡಾವಣೆಯ ನಿವೇಶನಗಳು ಬಿಬಿಎಂಪಿ ವ್ಯಾಪ್ತಿಗೆ ಹಸ್ತಾಂತರವಾಗಿಲ್ಲ. ಖಾತೆ ಮತ್ತು ಕಂದಾಯ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದರು.</p>.<p>‘ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸ್ಥಳಗಳನ್ನು ಗುರುತಿಸಿ ಕಂದಾಯ ನಿಗದಿ ಪಡಿಸಿ, ಯಾವ ವಾರ್ಡ್ನಲ್ಲಿ ಸಮಸ್ಯೆ ಕಂಡು ಬರುತ್ತದೋ ಆ ವಾರ್ಡ್ನಲ್ಲಿ ಪುನರ್ ಸರ್ವೆ ಮಾಡಿಸಿ’ ಎಂದು ಲೋಕೇಶ್ ಸಲಹೆ ನೀಡಿದರು.</p>.<p>ಉಪ ಆಯುಕ್ತ ಕೆ.ಶಿವೇಗೌಡ, ‘2018-19ನೇ ಸಾಲಿನವರೆಗೆ ₹254 ಕೋಟಿ ಆಸ್ತಿ ತೆರಿಗೆ ಬಾಕಿ ಇತ್ತು. ಕೆಲವೇ ದಿನಗಳಲ್ಲಿ ₹141.56 ಕೋಟಿ ಬಾಕಿ ವಸೂಲಿ ಮಾಡಿದ್ದರೂ ಬಲಿಷ್ಠರು, ಉದ್ಯಮಿಗಳು ಇನ್ನೂ ಹತ್ತಾರು ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ತಿಂಗಳ ಒಳಗೆ ಆಸ್ತಿ ತೆರಿಗೆ ಪಾವತಿಸದಿದ್ದಲ್ಲಿ ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ‘ವೈಜ್ಞಾನಿಕ ರೀತಿಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು. ಮುಖ್ಯರಸ್ತೆಗಳಲ್ಲಿ ಎಲ್ಲಿಯೂ ಗುಂಡಿಗಳು ಕಾಣಬಾರದು’ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ. ಲೋಕೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ರಸ್ತೆಯಲ್ಲಿ ಹರಿದು ಗುಂಡಿ ಉಂಟಾಗುತ್ತದೆ. ಒಳಚರಂಡಿ ದುರಸ್ತಿ ಮಾಡಬೇಕು’ ಎಂದು ಹೇಳಿದರು.</p>.<p>‘ಖಾಲಿ ನಿವೇಶನಗಳಲ್ಲಿ ಕಸ ಇರುವುದು ಕಂಡುಬಂದರೆ ಅದರ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಹಾಗೂ ಪೊಲೀಸ್ ಕೇಸು ದಾಖಲು ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಆಸ್ತಿ ಮತ್ತು ಕಟ್ಟಡ ತೆರಿಗೆಯಲ್ಲಿ ಲೋಪಗಳಿದ್ದರೆ ಸ್ಥಳದಲ್ಲಿಯೇ ಪರಿಹರಿಸಬೇಕು. ತಪ್ಪು ಕಂಡು ಬಂದರೆ ಪುನರ್ ಅರ್ಜಿ ಪಡೆದು ಜಾಗ ಗುರುತಿಸಿ ಕಂದಾಯ ನಿಗದಿಪಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕೆಂಗೇರಿ ಸಹಾಯಕ ಕಂದಾಯ ಅಧಿಕಾರಿ ಸಂತೋಷ್ಕುಮಾರ್, ‘ಬಿಡಿಎ ವತಿಯಿಂದ ಕೆಲವು ಬಡಾವಣೆಯ ನಿವೇಶನಗಳು ಬಿಬಿಎಂಪಿ ವ್ಯಾಪ್ತಿಗೆ ಹಸ್ತಾಂತರವಾಗಿಲ್ಲ. ಖಾತೆ ಮತ್ತು ಕಂದಾಯ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದರು.</p>.<p>‘ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಸ್ಥಳಗಳನ್ನು ಗುರುತಿಸಿ ಕಂದಾಯ ನಿಗದಿ ಪಡಿಸಿ, ಯಾವ ವಾರ್ಡ್ನಲ್ಲಿ ಸಮಸ್ಯೆ ಕಂಡು ಬರುತ್ತದೋ ಆ ವಾರ್ಡ್ನಲ್ಲಿ ಪುನರ್ ಸರ್ವೆ ಮಾಡಿಸಿ’ ಎಂದು ಲೋಕೇಶ್ ಸಲಹೆ ನೀಡಿದರು.</p>.<p>ಉಪ ಆಯುಕ್ತ ಕೆ.ಶಿವೇಗೌಡ, ‘2018-19ನೇ ಸಾಲಿನವರೆಗೆ ₹254 ಕೋಟಿ ಆಸ್ತಿ ತೆರಿಗೆ ಬಾಕಿ ಇತ್ತು. ಕೆಲವೇ ದಿನಗಳಲ್ಲಿ ₹141.56 ಕೋಟಿ ಬಾಕಿ ವಸೂಲಿ ಮಾಡಿದ್ದರೂ ಬಲಿಷ್ಠರು, ಉದ್ಯಮಿಗಳು ಇನ್ನೂ ಹತ್ತಾರು ಕೋಟಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ತಿಂಗಳ ಒಳಗೆ ಆಸ್ತಿ ತೆರಿಗೆ ಪಾವತಿಸದಿದ್ದಲ್ಲಿ ಅವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>