<p><strong>ಬೆಂಗಳೂರು:</strong> ‘ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು. ಚಾಮುಂಡೇಶ್ವರಿ ತಾಯಿ ಮೇಲೆ ಆಣೆ ಮಾಡಿ ಹೇಳುತ್ತೇನೆ. ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ’ ಎಂದು ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದರು.</p>.<p>ಕ್ಷೇತ್ರದಲ್ಲಿ ಗೆಲುವು ಖಚಿತವಾಗುತ್ತಿದ್ದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲ ಚುನಾವಣೆಯಲ್ಲಿ 17 ಸಾವಿರ ಮತಗಳಿಂದ, ಎರಡನೇ ಚುನಾವಣೆಯಲ್ಲಿ 26 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದೆ. ಈ ಬಾರಿ 57 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದೇನೆ’ ಎಂದರು.</p>.<p>‘ನನ ಗೆಲುವಿಗೆ ಎಲ್ಲರೂ ಕಾರಣ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಚಿವರು, ಶಾಸಕರಿಗೆ ನನ್ನ ಗೆಲುವುನ್ನು ಅರ್ಪಿಸುತ್ತೇನೆ’ ಎಂದರು.</p>.<p>‘ನನ್ನ ವಿರೋಧಿ ಅಭ್ಯರ್ಥಿ (ಕಾಂಗ್ರೆಸ್ನ ಕುಸುಮಾ) ನಿಜ ಮಾತನಾಡಬೇಕು. ಕೊನೆ ಕ್ಷಣದಲ್ಲಿ ನಾನು ಆಡದ ಮಾತನ್ನು ಆಡಿದ್ದೇನೆ ಎಂದು ಹೇಳಿ ಅಪಪ್ರಚಾರ ಮಾಡಿದರು. ಆದರೆ, ನಾನು ಎಂದೂ ಹೆಣ್ಣು ಮಕ್ಕಳು ವಿರುದ್ದ ಮಾತನಾಡಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು. ಚಾಮುಂಡೇಶ್ವರಿ ತಾಯಿ ಮೇಲೆ ಆಣೆ ಮಾಡಿ ಹೇಳುತ್ತೇನೆ. ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ’ ಎಂದು ಆರ್.ಆರ್. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದರು.</p>.<p>ಕ್ಷೇತ್ರದಲ್ಲಿ ಗೆಲುವು ಖಚಿತವಾಗುತ್ತಿದ್ದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೊದಲ ಚುನಾವಣೆಯಲ್ಲಿ 17 ಸಾವಿರ ಮತಗಳಿಂದ, ಎರಡನೇ ಚುನಾವಣೆಯಲ್ಲಿ 26 ಸಾವಿರ ಮತಗಳಿಂದ ಗೆಲುವು ಸಾಧಿಸಿದ್ದೆ. ಈ ಬಾರಿ 57 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದೇನೆ’ ಎಂದರು.</p>.<p>‘ನನ ಗೆಲುವಿಗೆ ಎಲ್ಲರೂ ಕಾರಣ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಚಿವರು, ಶಾಸಕರಿಗೆ ನನ್ನ ಗೆಲುವುನ್ನು ಅರ್ಪಿಸುತ್ತೇನೆ’ ಎಂದರು.</p>.<p>‘ನನ್ನ ವಿರೋಧಿ ಅಭ್ಯರ್ಥಿ (ಕಾಂಗ್ರೆಸ್ನ ಕುಸುಮಾ) ನಿಜ ಮಾತನಾಡಬೇಕು. ಕೊನೆ ಕ್ಷಣದಲ್ಲಿ ನಾನು ಆಡದ ಮಾತನ್ನು ಆಡಿದ್ದೇನೆ ಎಂದು ಹೇಳಿ ಅಪಪ್ರಚಾರ ಮಾಡಿದರು. ಆದರೆ, ನಾನು ಎಂದೂ ಹೆಣ್ಣು ಮಕ್ಕಳು ವಿರುದ್ದ ಮಾತನಾಡಲಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>