ಯಶವಂತಪುರ ಬಿ.ಕೆ. ನಗರದಲ್ಲಿ ಬುಧವಾರ ರಾತ್ರಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಸಿದ ಶಿವಕುಮಾರ್, ‘ಕನಕಪುರ ಕ್ಷೇತ್ರ ನನಗೆ ಎಷ್ಟು ಮುಖ್ಯವೋ, ಆರ್. ಆರ್. ನಗರವೂ ಅಷ್ಟೇ ಮುಖ್ಯ. ಪೊಲೀಸ್ ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಮುಂದೆ ನಿಮ್ಮ ಭವಿಷ್ಯಕ್ಕೆ ಮುಳುವಾಗುತ್ತದೆ. ನಿಮ್ಮನ್ನು ಇಲ್ಲಿಂದ ಎತ್ತಂಗಡಿ ಮಾಡಿಸುತ್ತೇನೆ’ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು.