ಡಿ.ಕೆ. ಶಿವಕುಮಾರ್ ಒಕ್ಕಲಿಗರ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ರಾಜಕೀಯ ವಲಯದಲ್ಲಿನ ಚರ್ಚೆ ಕುರಿತು ಪ್ರಶ್ನಿಸಿದಾಗ, ‘ಅವರು ಅವರ ಪಕ್ಷದ ರಾಜಕೀಯ ಮಾಡುತ್ತಾರೆ. ನಾನು ನನ್ನ ಪಕ್ಷದ ರಾಜಕಾರಣ ಮಾಡುತ್ತೇನೆ. ಕುಮಾರಸ್ವಾಮಿಗಾಗಿ ಯಾರೋ ತ್ಯಾಗ ಮಾಡಿದರು, ದೇವೇಗೌಡರ ಕುಟುಂಬಕ್ಕೆ ರಕ್ಷಣೆ ನೀಡಿದರು ಎಂಬುದಾಗಿ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗಳೆಲ್ಲವೂ ವಾಸ್ತವಕ್ಕೆ ದೂರವಾದವು’ ಎಂದರು.