ಶನಿವಾರ, ಏಪ್ರಿಲ್ 1, 2023
23 °C

ಮಕ್ಕಳಿಗೆ ಪಾಠ ಮಾಡಿದ ಕುಸುಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿ ನಗರ: ಕಾಂಗ್ರೆಸ್‌ ನಾಯಕಿ ಎಚ್. ಕುಸುಮಾ ಅವರು, ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾತನ್‌ ನಗರ ಕೊಳೆಗೇರಿ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಮಕ್ಕಳಿಗೆ ಪಾಠ ಮಾಡಿದರು.

ಕೊಳಚೆ ಪ್ರದೇಶದ ಪ್ರತಿ ಮನೆಗೆ ಭೇಟಿ ನೀಡಿದ ಅವರು, ಜನರ ಕಷ್ಟ ಸುಖ ವಿಚಾರಿಸಿದರು. ‘ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ’ ಎಂದು ಪೋಷಕರಲ್ಲಿ ಮನವಿ ಮಾಡಿದರು. 

‘ಕೋವಿಡ್‌ ಬಿಕ್ಕಟ್ಟು ಆರಂಭವಾಗಿ ಒಂದು ವರ್ಷವೇ ಕಳೆದಿದ್ದರೂ ಯಾವುದೇ ಆರೋಗ್ಯಾಧಿಕಾರಿಯಾಗಲಿ, ಆಶಾ ಕಾರ್ಯಕರ್ತರಾಗಲಿ ಭೇಟಿ ನೀಡಿಲ್ಲ. ಬಡವರ ಬಗ್ಗೆ ಸರ್ಕಾರ ತೀವ್ರ ನಿರ್ಲಕ್ಷ್ಯ ತೋರಿಸುತ್ತಿದೆ’ ಎಂದು ಸ್ಥಳೀಯ ನಿವಾಸಿ ಲತಾ ಎಂಬುವರು ದೂರಿದರು.

‘ಈ ಪ್ರದೇಶ ಬಿಬಿಎಂಪಿ ವ್ಯಾಪ್ತಿಗೆ ಒಳಪಟ್ಟಿದ್ದರೂ ಇಲ್ಲಿನ ನಿವಾಸಿಗಳಿಗೆ ಪಡಿತರ ಕಾರ್ಡ್‌ ಇಲ್ಲ, ಆಧಾರ್‌ ಕಾರ್ಡ್‌ ಕೂಡ ಒದಗಿಸಿಲ್ಲ. ಶೌಚಾಲಯ ಸೌಲಭ್ಯ ಕೂಡ ಇಲ್ಲ. ಮಣ್ಣುಮಿಶ್ರಿತ ಕೊಳವೆಬಾವಿ ನೀರನ್ನೇ ಕುಡಿಯುವ ಪರಿಸ್ಥಿತಿ ಇದೆ’ ಎಂದು ಕುಸುಮಾ ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು