<p><strong>ರಾಜರಾಜೇಶ್ವರಿನಗರ</strong>: ‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ರಸ್ತೆ ದುರಸ್ತಿ ಮಾಡಲು ವಿಫಲವಾಗಿರುವ ಎಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಕೆಪಿಸಿಸಿ ವಕ್ತಾರೆ ಎಚ್.ಕುಸುಮ ಅವರು ಬೆಂಗಳೂರು ಪಶ್ಚಿಮ ನಗರಪಾಲಿಕೆ ಆಯುಕ್ತ ಕೆ.ವಿ.ರಾಜೇಂದ್ರ ಅವರಿಗೆ ದೂರು ನೀಡಿದ್ದಾರೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ರಸ್ತೆ ಗುಂಡಿ ಮುಚ್ಚದಂತೆ ಸ್ಥಳೀಯ ಶಾಸಕ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>‘ರಾಜಕೀಯದಿಂದಾಗಿ ಜನ ತೊಂದರೆ ಅನುಭವಿಸುತ್ತಿದ್ದು, ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು‘ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ರಸ್ತೆ ದುರಸ್ತಿ ಮಾಡಲು ವಿಫಲವಾಗಿರುವ ಎಂಜಿನಿಯರ್ಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಕೆಪಿಸಿಸಿ ವಕ್ತಾರೆ ಎಚ್.ಕುಸುಮ ಅವರು ಬೆಂಗಳೂರು ಪಶ್ಚಿಮ ನಗರಪಾಲಿಕೆ ಆಯುಕ್ತ ಕೆ.ವಿ.ರಾಜೇಂದ್ರ ಅವರಿಗೆ ದೂರು ನೀಡಿದ್ದಾರೆ.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ದಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಟ್ಟ ಹೆಸರು ತರಲು ರಸ್ತೆ ಗುಂಡಿ ಮುಚ್ಚದಂತೆ ಸ್ಥಳೀಯ ಶಾಸಕ ಮುನಿರತ್ನ ಅವರು ಅಧಿಕಾರಿಗಳ ಮೇಲೆ ಒತ್ತಡ ತರುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p>‘ರಾಜಕೀಯದಿಂದಾಗಿ ಜನ ತೊಂದರೆ ಅನುಭವಿಸುತ್ತಿದ್ದು, ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು‘ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>