<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾ ವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಅವಕಾಶ ಇತ್ತಾದರೂ, ತನ್ನ ಶಕ್ತಿ ಕೇಂದ್ರಗಳ ಮಟ್ಟದಲ್ಲಿ ಬಿಜೆಪಿ ಕಾರ್ಯಾಚರಣೆ ನಡೆಸಿದೆ. ಮನೆ, ಮನೆ ಪ್ರಚಾರದ ಜತೆಯಲ್ಲೇ ಮತದಾರರಿಗೆ ‘ವೋಟರ್ ಸ್ಲಿಪ್’ ವಿತರಿಸುವ ಕೆಲಸಕ್ಕೆ ಚಾಲನೆ ನೀಡಿದೆ.</p>.<p>ಮತದಾರರ ಪಟ್ಟಿಯಲ್ಲಿ ಹೆಸರಿರುವ ಎಲ್ಲರಿಗೂ ಚುನಾವಣಾ ಆಯೋಗದಿಂದ ‘ವೋಟರ್ ಸ್ಲಿಪ್’ ವಿತರಿಸಲಾಗುತ್ತಿದೆ. ಅದನ್ನು ಮತದಾನದ ವೇಳೆ ಗುರು<br />ತಿನ ಚೀಟಿಯಾಗಿಯೂ ಬಳಸಲು ಅವಕಾಶವಿದೆ. ಅಂತಹ ‘ವೋಟರ್ ಸ್ಲಿಪ್’ಮುದ್ರಿಸಿರುವ ಬಿಜೆಪಿ, ಎಲ್ಲ ಮತದಾರರಿಗೂ ತಲುಪಿಸಲು ಪಕ್ಷದ ಕಾರ್ಯಕರ್ತರನ್ನು ನಿಯೋಜಿಸಿದೆ.</p>.<p>ಪ್ರತಿ ಮತಗಟ್ಟೆ ಹಂತದಲ್ಲಿ ಪಕ್ಷದ ಸಮಿತಿಗಳ ಅಧ್ಯಕ್ಷರಿಗೆ ವೋಟರ್ ಸ್ಲಿಪ್ ವಿತರಣೆಯ ಜವಾಬ್ದಾರಿ ನೀಡಲಾಗಿದೆ.</p>.<p class="Subhead">ಮಾತಿನ ಚಕಮಕಿ: ಅಂತಿಮ ಸುತ್ತಿನ ಪ್ರಚಾರ ಆರಂಭವಾಗುತ್ತಿದ್ದಂತೆಯೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಹಲವು ಕಡೆಗಳಲ್ಲಿ ಮಾತಿನ ಚಕಮಕಿ ನಡೆದಿದೆ. ಭಾನುವಾರ ‘ವೋಟರ್ ಸ್ಲಿಪ್’ ವಿತರಣೆಗೆ ಬಂದಿದ್ದ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಯತ್ನಿಸಿದರು.</p>.<p>ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾ ವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಅವಕಾಶ ಇತ್ತಾದರೂ, ತನ್ನ ಶಕ್ತಿ ಕೇಂದ್ರಗಳ ಮಟ್ಟದಲ್ಲಿ ಬಿಜೆಪಿ ಕಾರ್ಯಾಚರಣೆ ನಡೆಸಿದೆ. ಮನೆ, ಮನೆ ಪ್ರಚಾರದ ಜತೆಯಲ್ಲೇ ಮತದಾರರಿಗೆ ‘ವೋಟರ್ ಸ್ಲಿಪ್’ ವಿತರಿಸುವ ಕೆಲಸಕ್ಕೆ ಚಾಲನೆ ನೀಡಿದೆ.</p>.<p>ಮತದಾರರ ಪಟ್ಟಿಯಲ್ಲಿ ಹೆಸರಿರುವ ಎಲ್ಲರಿಗೂ ಚುನಾವಣಾ ಆಯೋಗದಿಂದ ‘ವೋಟರ್ ಸ್ಲಿಪ್’ ವಿತರಿಸಲಾಗುತ್ತಿದೆ. ಅದನ್ನು ಮತದಾನದ ವೇಳೆ ಗುರು<br />ತಿನ ಚೀಟಿಯಾಗಿಯೂ ಬಳಸಲು ಅವಕಾಶವಿದೆ. ಅಂತಹ ‘ವೋಟರ್ ಸ್ಲಿಪ್’ಮುದ್ರಿಸಿರುವ ಬಿಜೆಪಿ, ಎಲ್ಲ ಮತದಾರರಿಗೂ ತಲುಪಿಸಲು ಪಕ್ಷದ ಕಾರ್ಯಕರ್ತರನ್ನು ನಿಯೋಜಿಸಿದೆ.</p>.<p>ಪ್ರತಿ ಮತಗಟ್ಟೆ ಹಂತದಲ್ಲಿ ಪಕ್ಷದ ಸಮಿತಿಗಳ ಅಧ್ಯಕ್ಷರಿಗೆ ವೋಟರ್ ಸ್ಲಿಪ್ ವಿತರಣೆಯ ಜವಾಬ್ದಾರಿ ನೀಡಲಾಗಿದೆ.</p>.<p class="Subhead">ಮಾತಿನ ಚಕಮಕಿ: ಅಂತಿಮ ಸುತ್ತಿನ ಪ್ರಚಾರ ಆರಂಭವಾಗುತ್ತಿದ್ದಂತೆಯೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಹಲವು ಕಡೆಗಳಲ್ಲಿ ಮಾತಿನ ಚಕಮಕಿ ನಡೆದಿದೆ. ಭಾನುವಾರ ‘ವೋಟರ್ ಸ್ಲಿಪ್’ ವಿತರಣೆಗೆ ಬಂದಿದ್ದ ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಯತ್ನಿಸಿದರು.</p>.<p>ಈ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>