ನಂತರ ಮಾತನಾಡಿ, ‘ಭಾರಿ ಮಳೆ ಸುರಿದ ಕಾರಣ ಕಳೆದ 4 ತಿಂಗಳಿಂದ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಧ್ಯಾನಮಂದಿರ, ಸರ್ಕಾರಿ ಶಾಲಾ ಕಟ್ಟಡಗಳು, ಪಾದಚಾರಿ ಮಾರ್ಗ, ರಸ್ತೆ, ಚರಂಡಿ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಎಲ್ಲ ರಸ್ತೆಗಳ ಡಾಂಬರೀಕರಣ, ಚರಂಡಿ, ಉದ್ಯಾನ ನಿರ್ವಹಣೆ, ಕೆರೆಗಳ ಅಭಿವೃದ್ಧಿ, ವಿದ್ಯುತ್ ದೀಪ ಸೇರಿದಂತೆ ಬಿಬಿಎಂಪಿಯ ಬಹುತೇಕ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ‘ ಎಂದರು.