ಕಳೆದ ಮೂರು ವರ್ಷಗಳಲ್ಲಿ ₹1,060.85 ಕೋಟಿ ಅನುದಾನವನ್ನು ಮುಖ್ಯಮಂತ್ರಿಯವರ ನವ ನಗರೋತ್ಥಾನ ಯೋಜನೆಯಡಿ ಒದಗಿಸಲಾಗಿದೆ. ಈ ಅನುದಾನದಡಿ ಒಟ್ಟು 112.83 ಕಿ.ಮೀ ಉದ್ದದ ಪ್ರಥಮ ಮತ್ತು ದ್ವಿತೀಯ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ನಗರದಲ್ಲಿ ಸುಮಾರು 800 ಕಿ.ಮೀಗಳಷ್ಟು ಉದ್ದದ ಮಳೆನೀರುಗಾಲುವೆ ಹಾಳಾಗಿವೆ. ಇವು ಅತ್ಯಂತ ಹಳೆಯದಾಗಿದ್ದು, ಇವುಗಳಿಗೆ ಕಾಂಕ್ರೀಟ್ ಗೋಡೆ ಕಟ್ಟಿ ಸರಿಪಡಿಸಲಾಗುತ್ತಿದೆ. ಇದರಿಂದ ಮಳೆ ನೀರಿನಿಂದ ಆಗುತ್ತಿದ್ದ ಹಾನಿಯನ್ನು ತಡೆಯಬಹುದಾಗಿದೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದರು.