<p><strong>ಬೆಂಗಳೂರು: ‘</strong>ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾರ್ಚ್ 31ರ ಒಳಗೆ ₹ 100 ಕೋಟಿ ಬಿಡುಗಡೆ ಮಾಡಲಾಗುವುದು. ಅಲ್ಲದೆ, 2023–24ನೇ ಸಾಲಿನ ಬಜೆಟ್ನಲ್ಲೂ ಮತ್ತೆ ₹ 100 ಕೋಟಿ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಹಮ್ಮಿಕೊಂಡಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅನುದಾನವನ್ನು ಗಡಿಭಾಗ, ಹೊರನಾಡ ಕನ್ನಡಿಗರ ಭಾವನೆಗಳಿಗೆ ಪೂರಕವಾದ<br />ಕೆಲಸಗಳಿಗೆ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>‘ಒಂದೇ ಪ್ರದೇಶದಲ್ಲಿ ಭಾಷೆಗಳ ಆಧಾರದಲ್ಲಿ ರಾಜ್ಯಗಳು ಅಸ್ತಿತ್ವಕ್ಕೆ ಬಂದ ಕಾರಣದಿಂದ ಗಡಿ ಭಾಗದಲ್ಲಿ ಕೆಲವು ಸಮಸ್ಯೆಗಳಿವೆ. ಹಲವು ಭಾಗಗಳಲ್ಲಿ ಜನರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಆದರೆ, ರಾಜಕೀಯ ಕಾರಣಗಳಿಗಾಗಿ ಕೆಲವರು ಇಲ್ಲದ ಸಮಸ್ಯೆಗಳನ್ನು<br />ಸೃಷ್ಟಿಸುತ್ತಿದ್ದಾರೆ. ಇಂತಹ ಮನಃಸ್ಥಿತಿ ರಾಜ್ಯಕ್ಕೆ, ದೇಶಕ್ಕೆ ಒಳ್ಳೆಯದಲ್ಲ’ ಎಂದರು.</p>.<p>‘ಕರ್ನಾಟಕದ ಮುಖ್ಯಮಂತ್ರಿಯಾಗಿ<br />ಗಡಿಭಾಗ, ಹೊರನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಸರ್ಕಾರ ತವರು ಮನೆಯ ಜವಾಬ್ದಾರಿ ನಿಭಾಯಿಸುತ್ತಿದೆ. ಕನ್ನಡ ಭಾಷೆ, ನೆಲ, ಜಲ, ಗಡಿ ಸುರಕ್ಷಿತವಾಗಿವೆ. ಕೆಲವರು ಹೇಳಿದಂತೆ ಆತಂಕಕ್ಕೆ ಯಾವ ಕಾರಣವೂ ಇಲ್ಲ’ ಎಂದು ಹೇಳಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ, ‘ಭಾಷಾ ವಿಷಯದಲ್ಲಿ ರಾಜ್ಯಗಳ ಮಧ್ಯೆ ಸಮಸ್ಯೆ ಇದ್ದರೂ, ಸಾಂಸ್ಕೃತಿಕವಾಗಿ ಒಗ್ಗೂಡಿದ್ದೇವೆ. ಮಹಾರಾಷ್ಟ್ರದ ರಂಗಭೂಮಿಗೆ ಕರ್ನಾಟಕದ ಕೊಡುಗೆ ಸಾಕಷ್ಟಿದೆ. ಅದೇ ರೀತಿ ವಿವಿಧ ರಾಜ್ಯಗಳ ಮಧ್ಯೆ ಅನನ್ಯ ಸಾಂಸ್ಕೃತಿಕ ಬಾಂಧವ್ಯಗಳು ಬೆಸೆದಿವೆ’ ಎಂದರು.</p>.<p class="Subhead">ಪ್ರಶಸ್ತಿ ಪ್ರದಾನ: ‘ಗಡಿನಾಡ ಚೇತನ’ ಪ್ರಶಸ್ತಿಯನ್ನು ಜತ್ತದ ಕನ್ನಡ ಹೋರಾಟಗಾರ ಎಂ.ಎಸ್. ಸಿಂಧೂರ, ಬೆಳಗಾವಿಯ ಅಶೋಕ್ ಚಂದರಗಿ ಹಾಗೂ ಕಾಸರಗೋಡಿನ ಕನ್ನಡದ ಅಸ್ಮಿತೆಯ ಸಾಂಸ್ಕೃತಿಕ ಪೀಠ ಎಂದೇ ಗುರುತಿಸಿಕೊಂಡ ಎಡನೀರು ಮಠಕ್ಕೆ ನೀಡಿದ ಪ್ರಶಸ್ತಿಯನ್ನು ರಾಜೇಂದ್ರ ಕಲ್ಲೂರಾಯ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್, ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ರಾಣಿ ಸತೀಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾರ್ಚ್ 31ರ ಒಳಗೆ ₹ 100 ಕೋಟಿ ಬಿಡುಗಡೆ ಮಾಡಲಾಗುವುದು. ಅಲ್ಲದೆ, 2023–24ನೇ ಸಾಲಿನ ಬಜೆಟ್ನಲ್ಲೂ ಮತ್ತೆ ₹ 100 ಕೋಟಿ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಹಮ್ಮಿಕೊಂಡಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಅನುದಾನವನ್ನು ಗಡಿಭಾಗ, ಹೊರನಾಡ ಕನ್ನಡಿಗರ ಭಾವನೆಗಳಿಗೆ ಪೂರಕವಾದ<br />ಕೆಲಸಗಳಿಗೆ ಬಳಸಬೇಕು’ ಎಂದು ಸಲಹೆ ನೀಡಿದರು.</p>.<p>‘ಒಂದೇ ಪ್ರದೇಶದಲ್ಲಿ ಭಾಷೆಗಳ ಆಧಾರದಲ್ಲಿ ರಾಜ್ಯಗಳು ಅಸ್ತಿತ್ವಕ್ಕೆ ಬಂದ ಕಾರಣದಿಂದ ಗಡಿ ಭಾಗದಲ್ಲಿ ಕೆಲವು ಸಮಸ್ಯೆಗಳಿವೆ. ಹಲವು ಭಾಗಗಳಲ್ಲಿ ಜನರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಆದರೆ, ರಾಜಕೀಯ ಕಾರಣಗಳಿಗಾಗಿ ಕೆಲವರು ಇಲ್ಲದ ಸಮಸ್ಯೆಗಳನ್ನು<br />ಸೃಷ್ಟಿಸುತ್ತಿದ್ದಾರೆ. ಇಂತಹ ಮನಃಸ್ಥಿತಿ ರಾಜ್ಯಕ್ಕೆ, ದೇಶಕ್ಕೆ ಒಳ್ಳೆಯದಲ್ಲ’ ಎಂದರು.</p>.<p>‘ಕರ್ನಾಟಕದ ಮುಖ್ಯಮಂತ್ರಿಯಾಗಿ<br />ಗಡಿಭಾಗ, ಹೊರನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಸರ್ಕಾರ ತವರು ಮನೆಯ ಜವಾಬ್ದಾರಿ ನಿಭಾಯಿಸುತ್ತಿದೆ. ಕನ್ನಡ ಭಾಷೆ, ನೆಲ, ಜಲ, ಗಡಿ ಸುರಕ್ಷಿತವಾಗಿವೆ. ಕೆಲವರು ಹೇಳಿದಂತೆ ಆತಂಕಕ್ಕೆ ಯಾವ ಕಾರಣವೂ ಇಲ್ಲ’ ಎಂದು ಹೇಳಿದರು.</p>.<p>ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ, ‘ಭಾಷಾ ವಿಷಯದಲ್ಲಿ ರಾಜ್ಯಗಳ ಮಧ್ಯೆ ಸಮಸ್ಯೆ ಇದ್ದರೂ, ಸಾಂಸ್ಕೃತಿಕವಾಗಿ ಒಗ್ಗೂಡಿದ್ದೇವೆ. ಮಹಾರಾಷ್ಟ್ರದ ರಂಗಭೂಮಿಗೆ ಕರ್ನಾಟಕದ ಕೊಡುಗೆ ಸಾಕಷ್ಟಿದೆ. ಅದೇ ರೀತಿ ವಿವಿಧ ರಾಜ್ಯಗಳ ಮಧ್ಯೆ ಅನನ್ಯ ಸಾಂಸ್ಕೃತಿಕ ಬಾಂಧವ್ಯಗಳು ಬೆಸೆದಿವೆ’ ಎಂದರು.</p>.<p class="Subhead">ಪ್ರಶಸ್ತಿ ಪ್ರದಾನ: ‘ಗಡಿನಾಡ ಚೇತನ’ ಪ್ರಶಸ್ತಿಯನ್ನು ಜತ್ತದ ಕನ್ನಡ ಹೋರಾಟಗಾರ ಎಂ.ಎಸ್. ಸಿಂಧೂರ, ಬೆಳಗಾವಿಯ ಅಶೋಕ್ ಚಂದರಗಿ ಹಾಗೂ ಕಾಸರಗೋಡಿನ ಕನ್ನಡದ ಅಸ್ಮಿತೆಯ ಸಾಂಸ್ಕೃತಿಕ ಪೀಠ ಎಂದೇ ಗುರುತಿಸಿಕೊಂಡ ಎಡನೀರು ಮಠಕ್ಕೆ ನೀಡಿದ ಪ್ರಶಸ್ತಿಯನ್ನು ರಾಜೇಂದ್ರ ಕಲ್ಲೂರಾಯ ಅವರಿಗೆ ಪ್ರದಾನ ಮಾಡಲಾಯಿತು.</p>.<p>ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್, ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ರಾಣಿ ಸತೀಶ್<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>