‘ಒತ್ತುವರಿಯಾಗಿದ್ದ ಜಾಗವು ₹ 500 ಕೋಟಿ ಬೆಲೆಬಾಳುತ್ತದೆ. ಈ ಜಾಗಕ್ಕೆ ಸಂಬಂಧಿಸಿ ಪಾಲಿಕೆ ಆಯುಕ್ತರ ಹೆಸರಿನಲ್ಲಿ ಖಾತೆ ಮಾಡಿಸಲಾಗಿದೆ. ಪಾಲಿಕೆ ಆಯುಕ್ತ ಎನ್. ಮಂಜುನಾಥ್ ಪ್ರಸಾದ್, ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಬಿಡಿಎ ಆಯುಕ್ತ ಎಚ್.ಆರ್.ಮಹದೇವ್, ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ಜಿ. ಮಂಜುನಾಥ್, ಉಪ ಆಯುಕ್ತರಾದ ಲಕ್ಷ್ಮೀದೇವಿ ಅವರ ಸಹಕಾರ ಸ್ಮರಣೀಯ’ ಎಂದು ಮೇಯರ್ ತಿಳಿಸಿದ್ದಾರೆ.