ಕೆರೆಯ ಅಭಿವೃದ್ಧಿಯ ಮೇಲೆ ನಿಗಾ ವಹಿಸಲು ಕರ್ನಾಟಕ ಜೌಗು ಪ್ರದೇಶ ಪ್ರಾಧಿಕಾರದ ಮುಖ್ಯಸ್ಥರ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸ ಬೇಕು. ಈ ಸಮಿತಿಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಸಚಿವಾಲಯದ ಪ್ರಾದೇಶಿಕ ಅಧಿಕಾರಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಕೆಐಎಡಿಬಿಯ ಅಧಿಕಾರಿ ಇರಬೇಕು. ಈ ಸಮಿತಿಯು ಒಂದು ತಿಂಗ ಳೊಳಗೆ ಸಭೆ ಸೇರಿ ರೂಪರೇಷೆ ಸಿದ್ಧಪಡಿಸಬೇಕು ಎಂದೂ ಪೀಠ ಸೂಚಿಸಿದೆ.