<p><strong>ಬೆಂಗಳೂರು</strong>: ವಿಶೇಷ ಮೂಲಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೂರನೇ ತ್ರೈಮಾಸಿಕದ ₹675 ಕೋಟಿಯನ್ನು ಬಿಬಿಎಂಪಿಗೆ ಸರ್ಕಾರ ಜ.23ರಂದು ಬಿಡುಗಡೆ ಮಾಡಿದೆ.</p><p>ಬಂಡವಾಳ ಬೆಂಬಲ ಯೋಜನೆ ಯ ಕಾಮಗಾರಿಗಳಿಗೆ ಮಾತ್ರ ಈ ಅನುದಾನವನ್ನು ಬಿಡುಗಡೆ ಮಾಡ ಬೇಕು ಎಂದು ಬಿಬಿಎಂಪಿಗೆ ಷರತ್ತು ವಿಧಿಸಲಾಗಿದೆ.</p><p>ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೊದಲ ಎರಡು ತ್ರೈಮಾಸಿಕದಲ್ಲಿ ₹1,350 ಕೋಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ₹2,150 ಕೋಟಿ ಮೊತ್ತದ ಬಿಲ್ಗಳು ಇನ್ನೂ ಬಾಕಿ ಉಳಿದಿವೆ. ಈ ಬಿಲ್ಗಳನ್ನು ಪಾವತಿಸದಿದ್ದಲ್ಲಿ ಕಾಮಗಾರಿಗಳು ಕುಂಠಿತವಾಗುವ ಸಂಭವ ಇರುತ್ತದೆ. ಹೀಗಾಗಿ, ಮೂರನೇ ತ್ರೈಮಾಸಿಕದ ₹675 ಕೋಟಿ ಅನುದಾನವನ್ನು ಬಾಕಿ ಬಿಲ್ಗಳಿಗೆ ತುರ್ತಾಗಿ ಬಿಡುಗಡೆ ಮಾಡಲು ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಅನುದಾನ ಬಿಡುಗಡೆ ಆದೇಶದಲ್ಲಿ ಸೂಚಿಸಲಾಗಿದೆ.</p><p>ಎರಡನೇ ತ್ರೈಮಾಸಿಕದಲ್ಲಿ ಬಿಡುಗಡೆ ಮಾಡಲಾಗಿದ್ದ ₹675 ಕೋಟಿಯಲ್ಲಿ ₹100 ಕೋಟಿಯನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಂಸ್ಥೆಗೆ ಬಿಡುಗಡೆ ಮಾಡಲು ಆದೇಶಿಸಲಾಗಿತ್ತು. ಈ ಹಣವನ್ನು ಮುಂದುವರಿದ ಕಾಮಗಾರಿಗಳಿಗೆ ವಿನಿಯೋಗಿಸಬೇಕು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶೇಷ ಮೂಲಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೂರನೇ ತ್ರೈಮಾಸಿಕದ ₹675 ಕೋಟಿಯನ್ನು ಬಿಬಿಎಂಪಿಗೆ ಸರ್ಕಾರ ಜ.23ರಂದು ಬಿಡುಗಡೆ ಮಾಡಿದೆ.</p><p>ಬಂಡವಾಳ ಬೆಂಬಲ ಯೋಜನೆ ಯ ಕಾಮಗಾರಿಗಳಿಗೆ ಮಾತ್ರ ಈ ಅನುದಾನವನ್ನು ಬಿಡುಗಡೆ ಮಾಡ ಬೇಕು ಎಂದು ಬಿಬಿಎಂಪಿಗೆ ಷರತ್ತು ವಿಧಿಸಲಾಗಿದೆ.</p><p>ಯೋಜನೆಯ ₹3 ಸಾವಿರ ಕೋಟಿ ಅನುದಾನದಲ್ಲಿ ಮೊದಲ ಎರಡು ತ್ರೈಮಾಸಿಕದಲ್ಲಿ ₹1,350 ಕೋಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ₹2,150 ಕೋಟಿ ಮೊತ್ತದ ಬಿಲ್ಗಳು ಇನ್ನೂ ಬಾಕಿ ಉಳಿದಿವೆ. ಈ ಬಿಲ್ಗಳನ್ನು ಪಾವತಿಸದಿದ್ದಲ್ಲಿ ಕಾಮಗಾರಿಗಳು ಕುಂಠಿತವಾಗುವ ಸಂಭವ ಇರುತ್ತದೆ. ಹೀಗಾಗಿ, ಮೂರನೇ ತ್ರೈಮಾಸಿಕದ ₹675 ಕೋಟಿ ಅನುದಾನವನ್ನು ಬಾಕಿ ಬಿಲ್ಗಳಿಗೆ ತುರ್ತಾಗಿ ಬಿಡುಗಡೆ ಮಾಡಲು ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಅನುದಾನ ಬಿಡುಗಡೆ ಆದೇಶದಲ್ಲಿ ಸೂಚಿಸಲಾಗಿದೆ.</p><p>ಎರಡನೇ ತ್ರೈಮಾಸಿಕದಲ್ಲಿ ಬಿಡುಗಡೆ ಮಾಡಲಾಗಿದ್ದ ₹675 ಕೋಟಿಯಲ್ಲಿ ₹100 ಕೋಟಿಯನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಂಸ್ಥೆಗೆ ಬಿಡುಗಡೆ ಮಾಡಲು ಆದೇಶಿಸಲಾಗಿತ್ತು. ಈ ಹಣವನ್ನು ಮುಂದುವರಿದ ಕಾಮಗಾರಿಗಳಿಗೆ ವಿನಿಯೋಗಿಸಬೇಕು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>