<p><strong>ಯಲಹಂಕ</strong>: ‘ಹಿಂದೂಗಳಲ್ಲಿ ಸೂಕ್ತ ಜಾಗೃತಿ, ಒಗ್ಗಟ್ಟು ಹಾಗೂ ರಾಷ್ಟ್ರಪ್ರಜ್ಞೆ ಮೂಡದಿದ್ದರೆ 2050ರ ವೇಳೆಗೆ ಭಾರತ ಆಡಳಿತಾತ್ಮಕವಾಗಿ ಹಿಂದೂಗಳಿಂದ ಕೈತಪ್ಪುವ ಸ್ಥಿತಿ ನಿರ್ಮಾಣವಾಗಬಹುದು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಎಂ.ಆರ್.ಅನಂತ್ ಎಚ್ಚರಿಸಿದರು.</p>.<p>ಆರ್ಎಸ್ಎಸ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು, ಯಲಹಂಕ ಕ್ಷೇತ್ರ ಬಿಜೆಪಿ ಸಹಯೋಗದಲ್ಲಿ ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಮಾತನಾಡಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಯಲಹಂಕ ಕ್ಷೇತ್ರದ ನಗರ ಪ್ರದೇಶದ ಪ್ರತಿಯೊಂದು ವಾರ್ಡ್ ಹಾಗೂ ಗ್ರಾಮೀಣ ಭಾಗದ ಪ್ರತಿ ಹಳ್ಳಿಯ ಮಟ್ಟದಲ್ಲಿ ಹಿಂದೂ ಸಮಾಜೋತ್ಸವ ಆಚರಿಸಲಾಗಿದೆ. ಪರಕೀಯರಿಂದ ಹಿಂದೂ ಸಮಾಜ ರಕ್ಷಿಸಲು ಜಾಗೃತಿ ಮೂಡಿಸುವುದೇ ಸಮಾಜೋತ್ಸವದ ಉದ್ದೇಶ’ ಎಂದು ತಿಳಿಸಿದರು.</p>.<p>ಆದಿ ಚುಂಚನಗಿರಿ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಟಿ.ಚೆಲುವರಾಜ್ ಉಪಸ್ಥಿತರಿದ್ದರು.</p>.<p><strong>ಶೋಭಾಯಾತ್ರೆ:</strong> ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಂಗನಾಯಕನಹಳ್ಳಿಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಶೋಭಾಯಾತ್ರೆ ನಡೆಯಿತು. ಭಾರತಾಂಬೆ, ಮೈಲಪ್ಪನಹಳ್ಳಿ, ಹೊನ್ನೇನಹಳ್ಳಿ ಗ್ರಾಮದೇವತೆ ಮೂರ್ತಿಗಳೊಂದಿಗೆ ನಡೆದ ಶೋಭಾಯಾತ್ರೆಯಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ಹಿಂದೂಗಳಲ್ಲಿ ಸೂಕ್ತ ಜಾಗೃತಿ, ಒಗ್ಗಟ್ಟು ಹಾಗೂ ರಾಷ್ಟ್ರಪ್ರಜ್ಞೆ ಮೂಡದಿದ್ದರೆ 2050ರ ವೇಳೆಗೆ ಭಾರತ ಆಡಳಿತಾತ್ಮಕವಾಗಿ ಹಿಂದೂಗಳಿಂದ ಕೈತಪ್ಪುವ ಸ್ಥಿತಿ ನಿರ್ಮಾಣವಾಗಬಹುದು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಎಂ.ಆರ್.ಅನಂತ್ ಎಚ್ಚರಿಸಿದರು.</p>.<p>ಆರ್ಎಸ್ಎಸ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು, ಯಲಹಂಕ ಕ್ಷೇತ್ರ ಬಿಜೆಪಿ ಸಹಯೋಗದಲ್ಲಿ ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಮಾತನಾಡಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಯಲಹಂಕ ಕ್ಷೇತ್ರದ ನಗರ ಪ್ರದೇಶದ ಪ್ರತಿಯೊಂದು ವಾರ್ಡ್ ಹಾಗೂ ಗ್ರಾಮೀಣ ಭಾಗದ ಪ್ರತಿ ಹಳ್ಳಿಯ ಮಟ್ಟದಲ್ಲಿ ಹಿಂದೂ ಸಮಾಜೋತ್ಸವ ಆಚರಿಸಲಾಗಿದೆ. ಪರಕೀಯರಿಂದ ಹಿಂದೂ ಸಮಾಜ ರಕ್ಷಿಸಲು ಜಾಗೃತಿ ಮೂಡಿಸುವುದೇ ಸಮಾಜೋತ್ಸವದ ಉದ್ದೇಶ’ ಎಂದು ತಿಳಿಸಿದರು.</p>.<p>ಆದಿ ಚುಂಚನಗಿರಿ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಟಿ.ಚೆಲುವರಾಜ್ ಉಪಸ್ಥಿತರಿದ್ದರು.</p>.<p><strong>ಶೋಭಾಯಾತ್ರೆ:</strong> ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಂಗನಾಯಕನಹಳ್ಳಿಯಲ್ಲಿ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನದೊಂದಿಗೆ ಶೋಭಾಯಾತ್ರೆ ನಡೆಯಿತು. ಭಾರತಾಂಬೆ, ಮೈಲಪ್ಪನಹಳ್ಳಿ, ಹೊನ್ನೇನಹಳ್ಳಿ ಗ್ರಾಮದೇವತೆ ಮೂರ್ತಿಗಳೊಂದಿಗೆ ನಡೆದ ಶೋಭಾಯಾತ್ರೆಯಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>