<p><strong>ಬೆಂಗಳೂರು:</strong> ‘ಆರ್ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್, ದಲಿತರನ್ನು ಗುಲಾಮರನ್ನಾಗಿಸುವ ಹುನ್ನಾರ ನಡೆಸುತ್ತಿವೆ’ ಎಂದು ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಹೇಳಿದರು. </p>.<p>ಭೀಮ ಸಂಘಟನೆಗಳ ಮಹಾ ಒಕ್ಕೂಟ (ಬಿಎಸ್ಎಂಒ) ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಾಗೂ ಬಿಎಸ್ಎಂಒದ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಆರ್ಎಸ್ಎಸ್ ಮತ್ತು ವಿಶ್ವ ಹಿಂದೂ ಪರಿಷತ್ನಂತಹ ಸಂಘಟನೆಗಳು ದಲಿತರನ್ನು ದಮನಿಸುವ ಕೆಲಸ ಮಾಡುತ್ತಿವೆ. ಈಗಾಗಲೇ ಮುಸ್ಲಿಂ ಸಮುದಾಯವನ್ನು ಬಹಿರಂಗವಾಗಿ ದ್ವೇಷಿಸುತ್ತಿವೆ. ಇದನ್ನು ನಾವು ಖಂಡಿಸಬೇಕು’ ಎಂದು ಹೇಳಿದರು.</p>.<p>‘ಅಸ್ಪೃಶ್ಯತೆ, ಜಾತಿಯತೆ ವಿರುದ್ಧ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ನಡೆಸಿದರು. ಸಂವಿಧಾನ ರಚನೆ ಮಾಡುವುದರ ಮೂಲಕ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ಹೇಳಿದರು. </p>.<p>‘ವಿಶ್ವದ ಬೇರೆ–ಬೇರೆ ದೇಶಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ವಿರೂಪಗೊಳಿಸಲಾಗುತ್ತಿದೆ’ ಎಂದರು. </p>.<p>‘ಸಂವಿಧಾನ ಹಾಗೂ ಮೀಸಲಾತಿ ಸೌಲಭ್ಯವನ್ನು ರದ್ದುಗೊಳಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ನಾವು ಅವಕಾಶ ನೀಡಬಾರದು’ ಎಂದು ಹೇಳಿದರು. </p>.<p>ಬಿಎಸ್ಎಂಒ ಅಧ್ಯಕ್ಷ ಕೆ. ಮರಿಯಪ್ಪ, ಹೆಬ್ಬಾಳ ವೆಂಕಟೇಶ್, ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆರ್ಎಸ್ಎಸ್ ಹಾಗೂ ವಿಶ್ವ ಹಿಂದೂ ಪರಿಷತ್, ದಲಿತರನ್ನು ಗುಲಾಮರನ್ನಾಗಿಸುವ ಹುನ್ನಾರ ನಡೆಸುತ್ತಿವೆ’ ಎಂದು ಕನ್ನಡಪರ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಹೇಳಿದರು. </p>.<p>ಭೀಮ ಸಂಘಟನೆಗಳ ಮಹಾ ಒಕ್ಕೂಟ (ಬಿಎಸ್ಎಂಒ) ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಾಗೂ ಬಿಎಸ್ಎಂಒದ ಪ್ರಥಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಆರ್ಎಸ್ಎಸ್ ಮತ್ತು ವಿಶ್ವ ಹಿಂದೂ ಪರಿಷತ್ನಂತಹ ಸಂಘಟನೆಗಳು ದಲಿತರನ್ನು ದಮನಿಸುವ ಕೆಲಸ ಮಾಡುತ್ತಿವೆ. ಈಗಾಗಲೇ ಮುಸ್ಲಿಂ ಸಮುದಾಯವನ್ನು ಬಹಿರಂಗವಾಗಿ ದ್ವೇಷಿಸುತ್ತಿವೆ. ಇದನ್ನು ನಾವು ಖಂಡಿಸಬೇಕು’ ಎಂದು ಹೇಳಿದರು.</p>.<p>‘ಅಸ್ಪೃಶ್ಯತೆ, ಜಾತಿಯತೆ ವಿರುದ್ಧ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ನಡೆಸಿದರು. ಸಂವಿಧಾನ ರಚನೆ ಮಾಡುವುದರ ಮೂಲಕ ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ಹೇಳಿದರು. </p>.<p>‘ವಿಶ್ವದ ಬೇರೆ–ಬೇರೆ ದೇಶಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಆದರೆ, ನಮ್ಮ ದೇಶದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ವಿರೂಪಗೊಳಿಸಲಾಗುತ್ತಿದೆ’ ಎಂದರು. </p>.<p>‘ಸಂವಿಧಾನ ಹಾಗೂ ಮೀಸಲಾತಿ ಸೌಲಭ್ಯವನ್ನು ರದ್ದುಗೊಳಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ನಾವು ಅವಕಾಶ ನೀಡಬಾರದು’ ಎಂದು ಹೇಳಿದರು. </p>.<p>ಬಿಎಸ್ಎಂಒ ಅಧ್ಯಕ್ಷ ಕೆ. ಮರಿಯಪ್ಪ, ಹೆಬ್ಬಾಳ ವೆಂಕಟೇಶ್, ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>