‘2019–20ನೇ ಸಾಲಿನ ಮೊದಲನೇ ಕಂತಿನ ₹275 ಕೋಟಿಯನ್ನು ಆರ್ಥಿಕ ಇಲಾಖೆ ಬಿಡುಗಡೆ ಮಾಡಿದೆ. ಆದರೆ, 45 ದಿನಗಳಾದರೂ, ಸಂಬಂಧಿಸಿದ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಂತದಲ್ಲಿ ಹಣ ಬಿಡುಗಡೆಯಾಗಿಲ್ಲ. ಆಯುಕ್ತರ ಕಚೇರಿಯ ಆರ್ಟಿಇ ವಿಭಾಗದ ವಿಳಂಬ ಧೋರಣೆಯಿಂದ ಖಾಸಗಿ ಅನುದಾನಿತ ಶಾಲೆಗಳಿಗೆ ತೊಂದರೆಯಾಗುತ್ತಿದೆ’ ಎಂದು ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಹಾಗೂ ಮಾಜಿ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ.