ಆರ್ಟಿಐ ಅಧ್ಯಯನ ಕೇಂದ್ರದ ಟ್ರಸ್ಟಿ ವೀರೇಶ್ ಬೆಳ್ಳೂರು ಮಾತನಾಡಿ, ‘ನ್ಯಾಯಾಲಯಗಳಲ್ಲಿ ಕಲಾಪಗಳು ನಿಗದಿತ ಸಮಯಕ್ಕೆ ಆರಂಭವಾಗುತ್ತವೆ. ನ್ಯಾಯಾಧೀಶರು ಸಮಯ ಪಾಲನೆಯನ್ನು ಕಡ್ಡಾಯವಾಗಿ ಮಾಡುತ್ತಾರೆ. ಆದರೆ, ಮಾಹಿತಿ ಹಕ್ಕು ಆಯುಕ್ತರು ನಿಗದಿತ ಸಮಯಕ್ಕೆ ಕಚೇರಿಗೆ ಬರುವುದಿಲ್ಲ. ಬೇಕೆಂದಾಗ ವಾಪಸ್ ಹೋಗುತ್ತಾರೆ. ಹೀಗಾಗಿ ಇವರಿಗೆ ಹೊಣೆಗಾರಿಕೆ ನಿಗದಿ ಮಾಡುವ ಅಗತ್ಯ ಇದೆ’ ಎಂದರು.