ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಆರ್ಟಿಐ ಆನ್ಲೈನ್ ಜಾಲತಾಣ ಆರಂಭಿಸಿದೆ. ಇದರಿಂದ ಈ ಹಿಂದಿನಂತೆ ಕಚೇರಿಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ವೆಬ್ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸರ್ಕಾರದ ಉದ್ದೇಶವೇನೋ ಒಳ್ಳೆಯದೇ. ಆದರೆ, ಸಾರ್ವಜನಿಕ ಹಿತಾಸಕ್ತಿಯ ಮತ್ತು ಹಣದ ವ್ಯವಹಾರದಲ್ಲಿ ಪಾರದರ್ಶಕತೆಯ ಸಂದೇಹ ಬಂದರೆ, ಅದಕ್ಕೆ ಆಯಾ ಸಂಸ್ಥೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದಿದ್ದಾರೆ.