ಈ ಸಂಬಂಧ ವೈಟ್ಫೀಲ್ಡ್ ನಿವಾಸಿ ಸಿಜೊ ಸೆಬಾಸ್ಟಿನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ,‘ಮಾಹಿತಿ ನೀಡಲು ವಿಳಂಬ ಮಾಡಿ ತಪ್ಪು ಎಸಗಿದ ಅಧಿಕಾರಿಗೆ ಆಯೋಗವು ದಂಡ ವಿಧಿಸಬೇಕಿತ್ತು. ಆದರೆ, ಈ ಪ್ರಕರಣದಲ್ಲಿ ವಿಧಿಸದೇ ಇರುವುದು ಸಮ್ಮತವಲ್ಲ ಎಂಬ ಅರ್ಜಿದಾರರ ವಾದ ನ್ಯಾಯೋಚಿತವಾಗಿದೆ‘ ಎಂದು ಹೇಳಿದೆ.