‘ನಾನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಆಯುಕ್ತ ಎ.ಎಂ. ಯೋಗೀಶ್ ಅವರಿಗೆ ದೂರು ಸಲ್ಲಿಸಿದ್ದೆ. ಜಂಟಿ ಆಯುಕ್ತರಾದ ಶೋಭಾ ಅವರು ಇಲಾಖಾ ತನಿಖೆ ನಡೆಸಿ ವರದಿ ನೀಡಿದ್ದರು. ಅದರಂತೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿರುವುದು ಉತ್ತಮ ಕಾರ್ಯ’ ಎಂದು ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್. ನಟರಾಜ ಶರ್ಮಾ ಪ್ರತಿಕ್ರಿಯಿಸಿದ್ದಾರೆ.