<p><strong>ಬೆಂಗಳೂರು:</strong> ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುವ ಸರಕು ಸಾಗಣೆ ವಾಹನಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, 120 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜ್ಞಾನಭಾರತಿ ಆರ್ಟಿಒ ನೇತೃತ್ವದ ತಂಡ, ಮೈಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿತು. ಸಾರ್ವಜನಿಕರು, ಶಾಲಾ ಮಕ್ಕಳು, ಗಾರ್ಮೆಂಟ್ ಕಾರ್ಖಾನೆ ಉದ್ಯೋಗಿಗಳನ್ನು ಸರಕು ಸಾಗಣೆ ವಾಹನಗಳಲ್ಲಿ ಕರೆದೊಯ್ಯುತ್ತಿರುವುದು ಕಂಡುಬಂತು.</p>.<p>ಅಂಥ ವಾಹನಗಳ ಚಾಲಕರನ್ನು ವಿಚಾರಣೆಗೆ ಒಳಪಡಿಸಿದ ಆರ್ಟಿಒ, ಎಚ್ಚರಿಕೆ ನೀಡಿದರು. 120ವಾಹನಗಳವಿರುದ್ದಪ್ರಕರಣ ದಾಖಲಿಸಿಕೊಂಡು, 10ವಾಹನಗಳನ್ನು ಜಪ್ತಿ ಮಾಡಿದರು.</p>.<p>‘ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸುವುದು ಅಪಾಯಕಾರಿ. ಅಂಥ ವರ್ತನೆಯಿಂದ ಹಲವೆಡೆ ದುರಂತಗಳು ಸಂಭವಿಸಿವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು’ ಎಂದು ಅಧಿಕಾರಿ ಹೇಳಿದರು.</p>.<p>‘ಸಾರಿಗೆ ನಿಯಮ ಉಲ್ಲಂಘಿಸುವ ವಾಹನಗಳ ಪತ್ತೆಗಾಗಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುವ ಸರಕು ಸಾಗಣೆ ವಾಹನಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, 120 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜ್ಞಾನಭಾರತಿ ಆರ್ಟಿಒ ನೇತೃತ್ವದ ತಂಡ, ಮೈಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿತು. ಸಾರ್ವಜನಿಕರು, ಶಾಲಾ ಮಕ್ಕಳು, ಗಾರ್ಮೆಂಟ್ ಕಾರ್ಖಾನೆ ಉದ್ಯೋಗಿಗಳನ್ನು ಸರಕು ಸಾಗಣೆ ವಾಹನಗಳಲ್ಲಿ ಕರೆದೊಯ್ಯುತ್ತಿರುವುದು ಕಂಡುಬಂತು.</p>.<p>ಅಂಥ ವಾಹನಗಳ ಚಾಲಕರನ್ನು ವಿಚಾರಣೆಗೆ ಒಳಪಡಿಸಿದ ಆರ್ಟಿಒ, ಎಚ್ಚರಿಕೆ ನೀಡಿದರು. 120ವಾಹನಗಳವಿರುದ್ದಪ್ರಕರಣ ದಾಖಲಿಸಿಕೊಂಡು, 10ವಾಹನಗಳನ್ನು ಜಪ್ತಿ ಮಾಡಿದರು.</p>.<p>‘ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸುವುದು ಅಪಾಯಕಾರಿ. ಅಂಥ ವರ್ತನೆಯಿಂದ ಹಲವೆಡೆ ದುರಂತಗಳು ಸಂಭವಿಸಿವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು’ ಎಂದು ಅಧಿಕಾರಿ ಹೇಳಿದರು.</p>.<p>‘ಸಾರಿಗೆ ನಿಯಮ ಉಲ್ಲಂಘಿಸುವ ವಾಹನಗಳ ಪತ್ತೆಗಾಗಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>