ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮೇಲ್ಮನವಿಯಲ್ಲಿ ಜಾಮೀನಿಗೆ ಅನಾರೋಗ್ಯ ಮತ್ತು ವಿಚಾರಣೆ ವಿಳಂಬದ ಕಾರಣಗಳನ್ನು ನೀಡಲಾಗಿದೆ. ಆದರೆ, ಆರೋಪಿಯ ಹೃದಯ ಸಂಬಂಧಿ ಕಾಯಿಲೆ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ 2020ರ ಸೆ.6ರ ವರದಿ ಆಧರಿಸಿ ಎನ್ಐಎ ವಿಶೇಷ ನ್ಯಾಯಾಲಯ ಸೆ.8ರಂದು ಜಾಮೀನು ನಿರಾಕರಿಸಿ ಆದೇಶಿಸಿತ್ತು. ಹೀಗಾಗಿ, ಮೇಲ್ಮನವಿಯಲ್ಲಿ ಈ ಅಂಶ ಪರಿಗಣಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿತು.