<p><strong>ಬೆಂಗಳೂರು:</strong>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಐದನೇ ಆರೋಪಿ ಅಸೀಮ್ ಷರೀಫ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಶಿವಾಜಿನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್ ಅವರನ್ನು ಬೈಕ್ನಲ್ಲಿ ಬಂದ ಇಬ್ಬರುಕೊಲೆ ಮಾಡಿದ್ದರು.ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಗ್ಗೆ 9 ಗಂಟೆ ವೇಳೆಗೆ ನಡೆದಿತ್ತು.</p>.<p>ಈ ಪ್ರಕರಣದಲ್ಲಿ, ಅಸೀಮ್ ಷರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದಾರೆ.</p>.<p>ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ರುದ್ರೇಶ್ ಸ್ನೇಹಿತರಾದ ಬಿ.ಜಯರಾಂ, ಡಿ.ಕುಮಾರೇಶನ್ ಮತ್ತು ಹರಿಕೃಷ್ಣ ಅವರುಸಾಕ್ಷಿಗಳಾಗಿದ್ದಾರೆ.ಎನ್ಐಎ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.</p>.<p>ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ಅಕ್ರಮ ಕೂಟ ಕಾಯ್ದೆ–1967ರ ಅಡಿಯಲ್ಲೇ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಐದನೇ ಆರೋಪಿ ಅಸೀಮ್ ಷರೀಫ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>.<p>ಶಿವಾಜಿನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್ ಅವರನ್ನು ಬೈಕ್ನಲ್ಲಿ ಬಂದ ಇಬ್ಬರುಕೊಲೆ ಮಾಡಿದ್ದರು.ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಗ್ಗೆ 9 ಗಂಟೆ ವೇಳೆಗೆ ನಡೆದಿತ್ತು.</p>.<p>ಈ ಪ್ರಕರಣದಲ್ಲಿ, ಅಸೀಮ್ ಷರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಜೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದಾರೆ.</p>.<p>ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದಲ್ಲಿ ರುದ್ರೇಶ್ ಸ್ನೇಹಿತರಾದ ಬಿ.ಜಯರಾಂ, ಡಿ.ಕುಮಾರೇಶನ್ ಮತ್ತು ಹರಿಕೃಷ್ಣ ಅವರುಸಾಕ್ಷಿಗಳಾಗಿದ್ದಾರೆ.ಎನ್ಐಎ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.</p>.<p>ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ಅಕ್ರಮ ಕೂಟ ಕಾಯ್ದೆ–1967ರ ಅಡಿಯಲ್ಲೇ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>