<p><strong>ಬೆಂಗಳೂರು: </strong>ಪಶ್ಚಿಮ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ 16 ಆರೋಪಿಗಳನ್ನು ಬಂಧಿಸಿ, ₹ 64.21 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡ ಲಾಗಿದೆ. </p>.<p>619 ಗ್ರಾಂ ಚಿನ್ನಾಭರಣ, 30 ಗ್ರಾಂ ಬೆಳ್ಳಿಯ ಆಭರಣ, ವಿವಿಧ ಕಂಪನಿಗಳ 210 ಮೊಬೈಲ್, 9 ದ್ವಿಚಕ್ರ ವಾಹನ ಗಳು, 3 ಸೈಕಲ್, 1 ಆಟೊ ಹಾಗೂ ಎರಡು ವಾಚ್ ವಶಪಡಿಸಿಕೊಳ್ಳಲಾಗಿದೆ.</p>.<p>‘ಮನೆ ಬೀಗ ಒಡೆದು ಚಿನ್ನಾ ಭರಣ ಕಳವು, ದೇವರ ವಿಗ್ರಹದ ಚಿನ್ನದ ಸರ ಕಳವು, ಅಂಗಡಿಯ ಬೀಗ ಒಡೆದು ನಗದು, ಸಾಮಗ್ರಿ ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಾಗಡಿ ರಸ್ತೆ ಸುಮ್ಮನಹಳ್ಳಿ ಜಂಕ್ಷನ್ ರಿಂಗ್ ರಸ್ತೆಯಲ್ಲಿ ಲಾರಿ ಹಾಗೂ ಬಸ್ಗಳನ್ನು ನಿಲ್ಲಿಸಿಕೊಂಡು ಚಾಲಕರು ಹಾಗೂ ಕ್ಲೀನರ್ ವಿಶ್ರಾಂತಿ ಪಡೆಯುತ್ತಿದ್ದರು. ಅಲ್ಲಿಗೆ ನಾಲ್ವರು ಆರೋಪಿಗಳು ಬಂದು ಲಾಂಗ್ ತೋರಿಸಿ ಬೆದರಿಸಿ ನಗದು,ಮೊಬೈಲ್ ಕಸಿದು ಪರಾರಿಯಾಗಿದ್ದರು. ಆ ನಾಲ್ವರು ಆರೋಪಿಗಳನ್ನೂ ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ₹ 2.50 ಲಕ್ಷದ ಮೊಬೈಲ್ ಹಾಗೂ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ. ಬಿಲ್ ಕಲೆಕ್ಷನ್ ವ್ಯಕ್ತಿಗೆ ಚಾಕುವಿನಿಂದ ಇರಿದು ಹಣವಿದ್ದ ಬ್ಯಾಗ್ ಅಪಹರಿಸಿ ಪರಾರಿ ಆಗಿದ್ದನನ್ನು ಬಂಧಿಸಲಾಗಿದೆ’ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಶ್ಚಿಮ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ 16 ಆರೋಪಿಗಳನ್ನು ಬಂಧಿಸಿ, ₹ 64.21 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡ ಲಾಗಿದೆ. </p>.<p>619 ಗ್ರಾಂ ಚಿನ್ನಾಭರಣ, 30 ಗ್ರಾಂ ಬೆಳ್ಳಿಯ ಆಭರಣ, ವಿವಿಧ ಕಂಪನಿಗಳ 210 ಮೊಬೈಲ್, 9 ದ್ವಿಚಕ್ರ ವಾಹನ ಗಳು, 3 ಸೈಕಲ್, 1 ಆಟೊ ಹಾಗೂ ಎರಡು ವಾಚ್ ವಶಪಡಿಸಿಕೊಳ್ಳಲಾಗಿದೆ.</p>.<p>‘ಮನೆ ಬೀಗ ಒಡೆದು ಚಿನ್ನಾ ಭರಣ ಕಳವು, ದೇವರ ವಿಗ್ರಹದ ಚಿನ್ನದ ಸರ ಕಳವು, ಅಂಗಡಿಯ ಬೀಗ ಒಡೆದು ನಗದು, ಸಾಮಗ್ರಿ ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಾಗಡಿ ರಸ್ತೆ ಸುಮ್ಮನಹಳ್ಳಿ ಜಂಕ್ಷನ್ ರಿಂಗ್ ರಸ್ತೆಯಲ್ಲಿ ಲಾರಿ ಹಾಗೂ ಬಸ್ಗಳನ್ನು ನಿಲ್ಲಿಸಿಕೊಂಡು ಚಾಲಕರು ಹಾಗೂ ಕ್ಲೀನರ್ ವಿಶ್ರಾಂತಿ ಪಡೆಯುತ್ತಿದ್ದರು. ಅಲ್ಲಿಗೆ ನಾಲ್ವರು ಆರೋಪಿಗಳು ಬಂದು ಲಾಂಗ್ ತೋರಿಸಿ ಬೆದರಿಸಿ ನಗದು,ಮೊಬೈಲ್ ಕಸಿದು ಪರಾರಿಯಾಗಿದ್ದರು. ಆ ನಾಲ್ವರು ಆರೋಪಿಗಳನ್ನೂ ಪತ್ತೆ ಮಾಡಿ ಬಂಧಿಸಲಾಗಿದೆ. ಬಂಧಿತರಿಂದ ₹ 2.50 ಲಕ್ಷದ ಮೊಬೈಲ್ ಹಾಗೂ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ. ಬಿಲ್ ಕಲೆಕ್ಷನ್ ವ್ಯಕ್ತಿಗೆ ಚಾಕುವಿನಿಂದ ಇರಿದು ಹಣವಿದ್ದ ಬ್ಯಾಗ್ ಅಪಹರಿಸಿ ಪರಾರಿ ಆಗಿದ್ದನನ್ನು ಬಂಧಿಸಲಾಗಿದೆ’ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>