<p><strong>ಬೆಂಗಳೂರು:</strong> ‘ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಸರ್ಕಾರದ ವತಿಯಿಂದ ವಿಶೇಷ ಪ್ರೋತ್ಸಾಹ ಸಿಗುವಂತೆ ಮಾಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ಇಲ್ಲಿನ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್ಐ) ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ತೆರೆಯುವ ಆಸಕ್ತಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>‘ಕೇವಲ ಹಣ ಸಂಪಾದನೆಗೆಂದು ನಮ್ಮ ವೃತ್ತಿಯನ್ನು ಮೀಸಲಿಡಬಾರದು. ವೈದ್ಯರು ರೋಗಿಗಳ ವಿಶ್ವಾಸ ಗಳಿಸಬೇಕು. ಮಾನವೀಯ ಮೌಲ್ಯ ಅರ್ಥೈಸಿಕೊಂಡು ವೃತ್ತಿ ನಿರ್ವಹಿಸಬೇಕು’ ಎಂದರು.</p>.<p>ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಪಾಲ್ಗೊಂಡಿದ್ದರು.</p>.<p>*<br />ಆಯುಷ್ಮಾನ್ ಭಾರತ್ ಮೂಲಕ ಬಡ ಕುಟುಂಬಕ್ಕೆ ₹ 5 ಲಕ್ಷದವರೆಗೆ ವಿಮೆ ಪಡೆಯುವುದು ಸಾಧ್ಯವಾಗಿದೆ. ರಾಜ್ಯವೂ ಇದರಲ್ಲಿ ಕೈಜೋಡಿಸಿದೆ.<br /><em><strong>-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಸರ್ಕಾರದ ವತಿಯಿಂದ ವಿಶೇಷ ಪ್ರೋತ್ಸಾಹ ಸಿಗುವಂತೆ ಮಾಡಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ಇಲ್ಲಿನ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಬಿಎಂಸಿಆರ್ಐ) ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸರ್ಕಾರ ಪ್ರತಿ ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ತೆರೆಯುವ ಆಸಕ್ತಿಯನ್ನು ಹೊಂದಿದೆ’ ಎಂದು ತಿಳಿಸಿದರು.</p>.<p>‘ಕೇವಲ ಹಣ ಸಂಪಾದನೆಗೆಂದು ನಮ್ಮ ವೃತ್ತಿಯನ್ನು ಮೀಸಲಿಡಬಾರದು. ವೈದ್ಯರು ರೋಗಿಗಳ ವಿಶ್ವಾಸ ಗಳಿಸಬೇಕು. ಮಾನವೀಯ ಮೌಲ್ಯ ಅರ್ಥೈಸಿಕೊಂಡು ವೃತ್ತಿ ನಿರ್ವಹಿಸಬೇಕು’ ಎಂದರು.</p>.<p>ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಪಾಲ್ಗೊಂಡಿದ್ದರು.</p>.<p>*<br />ಆಯುಷ್ಮಾನ್ ಭಾರತ್ ಮೂಲಕ ಬಡ ಕುಟುಂಬಕ್ಕೆ ₹ 5 ಲಕ್ಷದವರೆಗೆ ವಿಮೆ ಪಡೆಯುವುದು ಸಾಧ್ಯವಾಗಿದೆ. ರಾಜ್ಯವೂ ಇದರಲ್ಲಿ ಕೈಜೋಡಿಸಿದೆ.<br /><em><strong>-ಡಾ.ಕೆ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>