<p><strong>ಬೆಂಗಳೂರು:</strong> ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಮರು ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಸೆಲ್ ಮಾರುಕಟ್ಟೆಯ ಮರು ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಿದೆ. ಅದನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು. ರಸೆಲ್ ಮಾರುಕಟ್ಟೆ ಒಂದು ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡುವ ಮೂಲಕ ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಬೇಕು. ಈ ಸಂಬಂಧ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಬೇರೆಡೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ, ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಮಾರುಕಟ್ಟೆ ಅಭಿವೃದ್ಧಿ ಸಂದರ್ಭದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಮಾರುಕಟ್ಟೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆ ಮಾಡಿಸಲು ಸೂಚಿಸಿದರು.</p>.<p>ಜಲಮಾರ್ಗ: ಹಲಸೂರು ಕೆರೆಗೆ ಮೂರು ಒಳಹರಿವುಗಳಿದ್ದು, ಅವುಗಳನ್ನು ಪರಿಶೀಲಿಸಿ ಕೆ–100 ಮಾದರಿಯಲ್ಲಿ ನಾಗರಿಕ ಜಲಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು. ಜೊತೆಗೆ ಹಲಸೂರು ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮಹೇಶ್ವರ್ ರಾವ್ ನಿರ್ದೇಶನ ನೀಡಿದರು.</p>.<p>ಹಲಸೂರು ಕೆರೆಯ ಬಳಿಯ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ವಾಯುವಿಹಾರ ಮಾರ್ಗ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ‘ಶಿವಾಜಿನಗರ ವ್ಯಾಪ್ತಿಯಲ್ಲಿರುವ ರಸೆಲ್ ಮಾರುಕಟ್ಟೆ ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಮರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p><p><strong>ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ</strong></p><p>ಬೆಂಗಳೂರು ಕೇಂದ್ರ ನಗರ ಪಾಲಿಕೆಗಳ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲು ಟೆಂಡರ್ ಆಹ್ವಾನಿಸಲಾಗಿದೆ.</p><p>ಕಮರ್ಷಿಯಲ್ ಸ್ಟ್ರೀಟ್ನಿಂದ ಒಪಿಎಚ್ ರಸ್ತೆ, ಮೈನ್ ಗಾರ್ಡ್ ರಸ್ತೆಯಿಂದ ಸಫೀನಾ ಪ್ಲಾಜಾ– ಡಿಸ್ಪೆನ್ಸರಿ ರಸ್ತೆ ಮತ್ತು ಡಿಕನ್ಸನ್ ರಸ್ತೆ.</p><p>ಡಿಸ್ಪೆನ್ಸರಿ ರಸ್ತೆಯಿಂದ ಕಾಮರಾಜ ರಸ್ತೆ, ಇಬ್ರಾಹಿಂ ಸಾಹಿಬ್ ಸ್ಟ್ರೀಟ್. ಮಿಲ್ಲರ್ ರಸ್ತೆ ಜಂಕ್ಷನ್, ಪ್ಲಾನಿಟೊರಿಯಂ ರಸ್ತೆ, ಸೇಂಟ್ ಜಾನ್ಸ್ ಚರ್ಚ್ ರಸ್ತೆ, ಸೇಂಟ್ ಜಾನ್ಸ್ ರಸ್ತೆ.</p><p>ದತ್ತಾತ್ರೇಯ ವಾರ್ಡ್ನಲ್ಲಿ 2ನೇ ಟೆಂಪಲ್ ರಸ್ತೆ, ಸಂಪಿಗೆ ರಸ್ತೆ, ರೈಲ್ವೆ ಪ್ಯಾರಲಲ್ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ.</p><p>ಮಾವಳ್ಳಿ ಟ್ಯಾಂಕ್ ಬಂಡ್ ರಸ್ತೆ, ಡಿವಿಜಿ ರಸ್ತೆ, ಶಂಕರಮಠ ರಸ್ತೆ, ಪಿಎಂಕೆ ರಸ್ತೆ.</p><p>ವಾಣಿವಿಲಾಸ್ ರಸ್ತೆ, ವಾಸವಿ ದೇವಸ್ಥಾನ ರಸ್ತೆ, ಕನಕಪುರ ರಸ್ತೆ, ಡಯಾಗನಲ್ ರಸ್ತೆ, ಪಟಾಲಮ್ಮ ರಸ್ತೆ,<br>ಟಿ. ಮರಿಯಪ್ಪ ರಸ್ತೆ.</p><p>ಕಾರುಗಳಿಗೆ ಪ್ರತಿ ಗಂಟೆಗೆ ₹30, ದ್ವಿಚಕ್ರ ವಾಹನಗಳಿಗೆ ಪ್ರತಿ ಗಂಟೆಗೆ ₹15, ನಿತ್ಯದ ಪಾಸ್ಗೆ ಕ್ರಮಗಾಗಿ ₹150 ಮತ್ತು ₹75 ನಿಗದಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಾಜಿನಗರದ ರಸೆಲ್ ಮಾರುಕಟ್ಟೆಯ ಮರು ಅಭಿವೃದ್ಧಿಗೆ ಕೂಡಲೇ ಟೆಂಡರ್ ಆಹ್ವಾನಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಸೆಲ್ ಮಾರುಕಟ್ಟೆಯ ಮರು ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಿದೆ. ಅದನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು. ರಸೆಲ್ ಮಾರುಕಟ್ಟೆ ಒಂದು ಪಾರಂಪರಿಕ ಕಟ್ಟಡವಾಗಿದ್ದು, ಅದಕ್ಕೆ ಆಧುನಿಕ ಸ್ಪರ್ಶ ನೀಡುವ ಮೂಲಕ ಜನಸ್ನೇಹಿ ಮಾರುಕಟ್ಟೆಯಾಗಿ ರೂಪಿಸಬೇಕು. ಈ ಸಂಬಂಧ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಬೇರೆಡೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ, ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಮಾರುಕಟ್ಟೆ ಅಭಿವೃದ್ಧಿ ಸಂದರ್ಭದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಬೇಕು. ಮಾರುಕಟ್ಟೆ ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ತ್ಯಾಜ್ಯ ವಿಂಗಡಣೆ ಹಾಗೂ ಕಾಂಪೋಸ್ಟಿಂಗ್ ವ್ಯವಸ್ಥೆ ಮಾಡಿಸಲು ಸೂಚಿಸಿದರು.</p>.<p>ಜಲಮಾರ್ಗ: ಹಲಸೂರು ಕೆರೆಗೆ ಮೂರು ಒಳಹರಿವುಗಳಿದ್ದು, ಅವುಗಳನ್ನು ಪರಿಶೀಲಿಸಿ ಕೆ–100 ಮಾದರಿಯಲ್ಲಿ ನಾಗರಿಕ ಜಲಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು. ಜೊತೆಗೆ ಹಲಸೂರು ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮಹೇಶ್ವರ್ ರಾವ್ ನಿರ್ದೇಶನ ನೀಡಿದರು.</p>.<p>ಹಲಸೂರು ಕೆರೆಯ ಬಳಿಯ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ವಾಯುವಿಹಾರ ಮಾರ್ಗ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ‘ಶಿವಾಜಿನಗರ ವ್ಯಾಪ್ತಿಯಲ್ಲಿರುವ ರಸೆಲ್ ಮಾರುಕಟ್ಟೆ ಅತ್ಯಂತ ಪುರಾತನ ಕಟ್ಟಡವಾಗಿದ್ದು, ಅದಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಮರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p><p><strong>ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ</strong></p><p>ಬೆಂಗಳೂರು ಕೇಂದ್ರ ನಗರ ಪಾಲಿಕೆಗಳ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸಲು ಟೆಂಡರ್ ಆಹ್ವಾನಿಸಲಾಗಿದೆ.</p><p>ಕಮರ್ಷಿಯಲ್ ಸ್ಟ್ರೀಟ್ನಿಂದ ಒಪಿಎಚ್ ರಸ್ತೆ, ಮೈನ್ ಗಾರ್ಡ್ ರಸ್ತೆಯಿಂದ ಸಫೀನಾ ಪ್ಲಾಜಾ– ಡಿಸ್ಪೆನ್ಸರಿ ರಸ್ತೆ ಮತ್ತು ಡಿಕನ್ಸನ್ ರಸ್ತೆ.</p><p>ಡಿಸ್ಪೆನ್ಸರಿ ರಸ್ತೆಯಿಂದ ಕಾಮರಾಜ ರಸ್ತೆ, ಇಬ್ರಾಹಿಂ ಸಾಹಿಬ್ ಸ್ಟ್ರೀಟ್. ಮಿಲ್ಲರ್ ರಸ್ತೆ ಜಂಕ್ಷನ್, ಪ್ಲಾನಿಟೊರಿಯಂ ರಸ್ತೆ, ಸೇಂಟ್ ಜಾನ್ಸ್ ಚರ್ಚ್ ರಸ್ತೆ, ಸೇಂಟ್ ಜಾನ್ಸ್ ರಸ್ತೆ.</p><p>ದತ್ತಾತ್ರೇಯ ವಾರ್ಡ್ನಲ್ಲಿ 2ನೇ ಟೆಂಪಲ್ ರಸ್ತೆ, ಸಂಪಿಗೆ ರಸ್ತೆ, ರೈಲ್ವೆ ಪ್ಯಾರಲಲ್ ರಸ್ತೆ, ಬಿವಿಕೆ ಅಯ್ಯಂಗಾರ್ ರಸ್ತೆ.</p><p>ಮಾವಳ್ಳಿ ಟ್ಯಾಂಕ್ ಬಂಡ್ ರಸ್ತೆ, ಡಿವಿಜಿ ರಸ್ತೆ, ಶಂಕರಮಠ ರಸ್ತೆ, ಪಿಎಂಕೆ ರಸ್ತೆ.</p><p>ವಾಣಿವಿಲಾಸ್ ರಸ್ತೆ, ವಾಸವಿ ದೇವಸ್ಥಾನ ರಸ್ತೆ, ಕನಕಪುರ ರಸ್ತೆ, ಡಯಾಗನಲ್ ರಸ್ತೆ, ಪಟಾಲಮ್ಮ ರಸ್ತೆ,<br>ಟಿ. ಮರಿಯಪ್ಪ ರಸ್ತೆ.</p><p>ಕಾರುಗಳಿಗೆ ಪ್ರತಿ ಗಂಟೆಗೆ ₹30, ದ್ವಿಚಕ್ರ ವಾಹನಗಳಿಗೆ ಪ್ರತಿ ಗಂಟೆಗೆ ₹15, ನಿತ್ಯದ ಪಾಸ್ಗೆ ಕ್ರಮಗಾಗಿ ₹150 ಮತ್ತು ₹75 ನಿಗದಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>