<p><strong>ಬೆಂಗಳೂರು</strong>: ರಾಜ್ಯದಲ್ಲಿ ಗುಜರಿ ನೀತಿ ಅಡಿಯಲ್ಲಿ ಶೀಘ್ರ ‘ನೋಂದಾಯಿತ ವಾಹನಗಳ ಗುಜರಿ ಸೌಲಭ್ಯ ಕೇಂದ್ರ’(ಆರ್ವಿಎಸ್ಎಫ್) ಸ್ಥಾಪನೆಯಾಗಲಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಮೊದಲ ಆರ್ವಿಎಸ್ಎಫ್ ಸ್ಥಾಪನೆಯಾಗಲಿದೆ. ಇದು ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರವಾಗಲಿದೆ.</p>.<p>ಹಳೆಯ ವಾಹನಗಳನ್ನು ನಾಶಪಡಿಸುವ ನೀತಿಯ ಅಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಗುಜರಿಗೆ ಹಾಕಿದ ವಾಹನಗಳನ್ನು ಪರಿಸರ ಸ್ನೇಹಿ ವಾತಾವರಣದಲ್ಲಿ ಮರುಬಳಕೆಗೆ ಅನುಕೂಲವಾಗುವಂತೆ ರೂಪಿಸುವುದು ಮತ್ತು ಹಾನಿಕಾರಕ ವಸ್ತುಗಳನ್ನು ವಿಲೇವಾರಿ ಮಾಡಲು ಯೋಜನೆ ರೂಪಿಸಲಾಗಿದೆ.</p>.<p>ಕೇಂದ್ರ ಸರ್ಕಾರ ಸ್ವಾಮ್ಯದ ಎಂಎಸ್ಟಿಸಿ ಮತ್ತು ಮಹಿಂದ್ರಾ ಅಕ್ಸೆಲೊ ಜಂಟಿ ಸಹಭಾಗಿತ್ವದ ‘ಮಹಿಂದ್ರಾ ಸೆರೊ’ ಈ ಸೌಲಭ್ಯವನ್ನು ಸ್ಥಾಪಿಸಲಿದೆ.</p>.<p>ಗುಜರಿ ನೀತಿ ಅಡಿಯಲ್ಲಿ 64 ಆರ್ವಿಎಸ್ಎಫ್ ಕೇಂದ್ರಗಳನ್ನು ದೇಶದಾದ್ಯಂತ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ತಡವಾಗಿ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.</p>.<p>ರಾಜ್ಯದಲ್ಲಿ ಮೂರು ಆರ್ವಿಎಸ್ಎಫ್ಗಳನ್ನು ಈ ವರ್ಷ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇತರ ಎರಡು ಕೇಂದ್ರಗಳು ತುಮಕೂರು ಜಿಲ್ಲೆಯ ಕೊರಟಗೆರೆ ಮತ್ತು ಕೊಪ್ಪಳದಲ್ಲಿ ಸ್ಥಾಪನೆಯಾಗಲಿವೆ. ಆರ್ಸಿ (ನೋಂದಣಿ ಪ್ರಮಾಣಪತ್ರ) ಮತ್ತು ಎಫ್ಸಿ(ಫಿಟ್ನೆಸ್ ಪ್ರಮಾಣಪತ್ರ) ನವೀಕರಿಸದ 15 ವರ್ಷಗಳಿಗಿಂತಲೂ ಹಳೆಯದಾದ ಎಲ್ಲ ಸರ್ಕಾರಿ ವಾಹನಗಳು ಮತ್ತು ಖಾಸಗಿ ವಾಹನಗಳನ್ನು ಈ ಕೇಂದ್ರದಲ್ಲಿ ಗುಜರಿಗೆ ಹಾಕಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸುಮಾರು ಹತ್ತು ಸಾವಿರ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಬೇಕಾಗಬಹುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಗುಜರಿ ನೀತಿ ಅಡಿಯಲ್ಲಿ ಶೀಘ್ರ ‘ನೋಂದಾಯಿತ ವಾಹನಗಳ ಗುಜರಿ ಸೌಲಭ್ಯ ಕೇಂದ್ರ’(ಆರ್ವಿಎಸ್ಎಫ್) ಸ್ಥಾಪನೆಯಾಗಲಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಮೊದಲ ಆರ್ವಿಎಸ್ಎಫ್ ಸ್ಥಾಪನೆಯಾಗಲಿದೆ. ಇದು ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರವಾಗಲಿದೆ.</p>.<p>ಹಳೆಯ ವಾಹನಗಳನ್ನು ನಾಶಪಡಿಸುವ ನೀತಿಯ ಅಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಗುಜರಿಗೆ ಹಾಕಿದ ವಾಹನಗಳನ್ನು ಪರಿಸರ ಸ್ನೇಹಿ ವಾತಾವರಣದಲ್ಲಿ ಮರುಬಳಕೆಗೆ ಅನುಕೂಲವಾಗುವಂತೆ ರೂಪಿಸುವುದು ಮತ್ತು ಹಾನಿಕಾರಕ ವಸ್ತುಗಳನ್ನು ವಿಲೇವಾರಿ ಮಾಡಲು ಯೋಜನೆ ರೂಪಿಸಲಾಗಿದೆ.</p>.<p>ಕೇಂದ್ರ ಸರ್ಕಾರ ಸ್ವಾಮ್ಯದ ಎಂಎಸ್ಟಿಸಿ ಮತ್ತು ಮಹಿಂದ್ರಾ ಅಕ್ಸೆಲೊ ಜಂಟಿ ಸಹಭಾಗಿತ್ವದ ‘ಮಹಿಂದ್ರಾ ಸೆರೊ’ ಈ ಸೌಲಭ್ಯವನ್ನು ಸ್ಥಾಪಿಸಲಿದೆ.</p>.<p>ಗುಜರಿ ನೀತಿ ಅಡಿಯಲ್ಲಿ 64 ಆರ್ವಿಎಸ್ಎಫ್ ಕೇಂದ್ರಗಳನ್ನು ದೇಶದಾದ್ಯಂತ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ತಡವಾಗಿ ಈ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.</p>.<p>ರಾಜ್ಯದಲ್ಲಿ ಮೂರು ಆರ್ವಿಎಸ್ಎಫ್ಗಳನ್ನು ಈ ವರ್ಷ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇತರ ಎರಡು ಕೇಂದ್ರಗಳು ತುಮಕೂರು ಜಿಲ್ಲೆಯ ಕೊರಟಗೆರೆ ಮತ್ತು ಕೊಪ್ಪಳದಲ್ಲಿ ಸ್ಥಾಪನೆಯಾಗಲಿವೆ. ಆರ್ಸಿ (ನೋಂದಣಿ ಪ್ರಮಾಣಪತ್ರ) ಮತ್ತು ಎಫ್ಸಿ(ಫಿಟ್ನೆಸ್ ಪ್ರಮಾಣಪತ್ರ) ನವೀಕರಿಸದ 15 ವರ್ಷಗಳಿಗಿಂತಲೂ ಹಳೆಯದಾದ ಎಲ್ಲ ಸರ್ಕಾರಿ ವಾಹನಗಳು ಮತ್ತು ಖಾಸಗಿ ವಾಹನಗಳನ್ನು ಈ ಕೇಂದ್ರದಲ್ಲಿ ಗುಜರಿಗೆ ಹಾಕಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಸುಮಾರು ಹತ್ತು ಸಾವಿರ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಬೇಕಾಗಬಹುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>