ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಉದ್ಯಮಿ, ಶ್ರೀ ನಾರಾಯಣಗುರು ಕೋ–ಆಪರೇಟಿವ್ ಸೊಸೈಟಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ‘ಬಂಗಾರಪ್ಪ ಕೇವಲ ನಮ್ಮ ಜನಾಂಗಕ್ಕೆ ಸೀಮಿತವಲ್ಲ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ಎಲ್ಲ ಜನಾಂಗದವರಿಗೆ ಉತ್ತಮ ಕಾರ್ಯಕ್ರಮಗಳನ್ನು ಜಾರಿ ತಂದಿದ್ದಾರೆ’ ಎಂದರು.