<p><strong>ಪೀಣ್ಯ ದಾಸರಹಳ್ಳಿ:</strong> ‘ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ನಾಲ್ಕು ವಾರ್ಡ್ಗಳಲ್ಲಿ ನಿಧಾನಗತಿಯಲ್ಲಿರುವ ಕಾಮಗಾರಿಗಳಿಗೆ ಒಂದು ವಾರದಲ್ಲಿ ವೇಗ ನೀಡಬೇಕು’ ಎಂದು ಶಾಸಕ ಎಸ್. ಮುನಿರಾಜು ಅವರು ಉತ್ತರ ನಗರ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ಕುಮಾರ್ ಅವರೊಂದಿಗೆ ಮಂಗಳವಾರ ನಡೆಸಿದ ಅಧಿಕಾರಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾಲ್ಕು ವಾರ್ಡ್ ಗಳಲ್ಲಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿವೆ. ಒಂದು ವಾರದೊಳಗೆ ಕಾನೂನು ಬದ್ಧ ಮತ್ತು ವ್ಯವಸ್ಥಿತವಾಗಿ ಎಲ್ಲಾ ಕಾಮಗಾರಿಗಳು ಚಾಲನೆ ಆಗಬೇಕು. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಅಧಿಕಾರಿಗಳಿಗೆ ಶಿಸ್ತಿನ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಎಂಜಿನಿಯರ್, ಕಂದಾಯ, ಜಲಮಂಡಳಿ, ಆರೋಗ್ಯ ಇಲಾಖೆ, ತೋಟಗಾರಿಕೆ, ಕಲ್ಯಾಣ ಇಲಾಖೆ ಮುಂತಾದ ಇಲಾಖೆಗಳ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ, ಆಯುಕ್ತರು ಶಿಸ್ತು ಕ್ರಮ ಜರುಗಿಸಲಿದ್ದಾರೆ ಎಂದರು.</p>.<p>ಜಂಟಿ ಆಯುಕ್ತೆ ಪಲ್ಲವಿ ಕೆ.ಆರ್, ಮುಖ್ಯ ಎಂಜಿನಿಯರ್ ಯಮುನಾ, ಉಪ ಆಯುಕ್ತೆ ಮಂಗಳ ಗೌರಿ, ಅಧೀಕ್ಷಕ ಎಂಜಿನಿಯರ್ ಕೃಷ್ಣಕುಮಾರ್, ಜಲಮಂಡಳಿಯ ಕಾರ್ಯಕಾರಿ ಎಂಜಿನಿಯರ್ ಮಂಜುನಾಥ್, ಇನ್ಸ್ಪೆಕ್ಟರ್ ಹನುಮಂತರಾಜು ಉಪಸ್ಥಿತರಿದ್ದರು.</p>.<p>ಪರಿಶೀಲನೆ: ಗ್ರಾಮದಿಂದ ಗ್ರಾಮಕ್ಕೆ ಕೆರೆಯ ಏರಿ ಮೇಲಿನ ರಸ್ತೆ ಸಂಪರ್ಕ, ಕೆರೆಗಳ ಸುರಕ್ಷತೆ, ಅಭಿವೃದ್ಧಿ ಮತ್ತು ಒತ್ತುವರಿ ಬಗ್ಗೆ ಶಿವಪುರ ಮತ್ತು ನೆಲಗದರನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಎಸ್. ಮುನಿರಾಜು ಪರಿಶೀಲನೆ ನಡೆಸಿದರು.</p>.<p>‘ಕೆರೆಗಳ ಏರಿಯ ಮೇಲೆ ಗ್ರಾಮದಿಂದ ಗ್ರಾಮಕ್ಕೆ ರಸ್ತೆ ಸಂಪರ್ಕವಿದೆ. ಯಾರಿಗೂ ತೊಂದರೆಯಾಗದಂತೆ ಸುರಕ್ಷಿತ ರಸ್ತೆ ಮತ್ತು ಕೆರೆ ಅಭಿವೃದ್ಧಿಪಡಿಸಲಾಗುತ್ತದೆ’ ಎಂದರು.</p>.<p>ಎಇಇ ವೆಂಕಟೇಶ್, ಎಇ ಪ್ರವೀಣ್, ಆರೋಗ್ಯ ಅಧಿಕಾರಿ ಮಮತಾ, ಬಿಜೆಪಿ ಮುಖಂಡರಾದ ಸಿ.ಎಂ. ನಾಗರಾಜು, ನಿಸರ್ಗ ಕೆಂಪರಾಜು, ಎಂ.ಕೆ. ಜಗದೀಶ್, ವೆಂಕಟೇಶ್ (ವೆಂಕಿ), ಕೌಸಲ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ನಾಲ್ಕು ವಾರ್ಡ್ಗಳಲ್ಲಿ ನಿಧಾನಗತಿಯಲ್ಲಿರುವ ಕಾಮಗಾರಿಗಳಿಗೆ ಒಂದು ವಾರದಲ್ಲಿ ವೇಗ ನೀಡಬೇಕು’ ಎಂದು ಶಾಸಕ ಎಸ್. ಮುನಿರಾಜು ಅವರು ಉತ್ತರ ನಗರ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ಕುಮಾರ್ ಅವರೊಂದಿಗೆ ಮಂಗಳವಾರ ನಡೆಸಿದ ಅಧಿಕಾರಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾಲ್ಕು ವಾರ್ಡ್ ಗಳಲ್ಲಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿವೆ. ಒಂದು ವಾರದೊಳಗೆ ಕಾನೂನು ಬದ್ಧ ಮತ್ತು ವ್ಯವಸ್ಥಿತವಾಗಿ ಎಲ್ಲಾ ಕಾಮಗಾರಿಗಳು ಚಾಲನೆ ಆಗಬೇಕು. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಅಧಿಕಾರಿಗಳಿಗೆ ಶಿಸ್ತಿನ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಎಂಜಿನಿಯರ್, ಕಂದಾಯ, ಜಲಮಂಡಳಿ, ಆರೋಗ್ಯ ಇಲಾಖೆ, ತೋಟಗಾರಿಕೆ, ಕಲ್ಯಾಣ ಇಲಾಖೆ ಮುಂತಾದ ಇಲಾಖೆಗಳ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ, ಆಯುಕ್ತರು ಶಿಸ್ತು ಕ್ರಮ ಜರುಗಿಸಲಿದ್ದಾರೆ ಎಂದರು.</p>.<p>ಜಂಟಿ ಆಯುಕ್ತೆ ಪಲ್ಲವಿ ಕೆ.ಆರ್, ಮುಖ್ಯ ಎಂಜಿನಿಯರ್ ಯಮುನಾ, ಉಪ ಆಯುಕ್ತೆ ಮಂಗಳ ಗೌರಿ, ಅಧೀಕ್ಷಕ ಎಂಜಿನಿಯರ್ ಕೃಷ್ಣಕುಮಾರ್, ಜಲಮಂಡಳಿಯ ಕಾರ್ಯಕಾರಿ ಎಂಜಿನಿಯರ್ ಮಂಜುನಾಥ್, ಇನ್ಸ್ಪೆಕ್ಟರ್ ಹನುಮಂತರಾಜು ಉಪಸ್ಥಿತರಿದ್ದರು.</p>.<p>ಪರಿಶೀಲನೆ: ಗ್ರಾಮದಿಂದ ಗ್ರಾಮಕ್ಕೆ ಕೆರೆಯ ಏರಿ ಮೇಲಿನ ರಸ್ತೆ ಸಂಪರ್ಕ, ಕೆರೆಗಳ ಸುರಕ್ಷತೆ, ಅಭಿವೃದ್ಧಿ ಮತ್ತು ಒತ್ತುವರಿ ಬಗ್ಗೆ ಶಿವಪುರ ಮತ್ತು ನೆಲಗದರನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಎಸ್. ಮುನಿರಾಜು ಪರಿಶೀಲನೆ ನಡೆಸಿದರು.</p>.<p>‘ಕೆರೆಗಳ ಏರಿಯ ಮೇಲೆ ಗ್ರಾಮದಿಂದ ಗ್ರಾಮಕ್ಕೆ ರಸ್ತೆ ಸಂಪರ್ಕವಿದೆ. ಯಾರಿಗೂ ತೊಂದರೆಯಾಗದಂತೆ ಸುರಕ್ಷಿತ ರಸ್ತೆ ಮತ್ತು ಕೆರೆ ಅಭಿವೃದ್ಧಿಪಡಿಸಲಾಗುತ್ತದೆ’ ಎಂದರು.</p>.<p>ಎಇಇ ವೆಂಕಟೇಶ್, ಎಇ ಪ್ರವೀಣ್, ಆರೋಗ್ಯ ಅಧಿಕಾರಿ ಮಮತಾ, ಬಿಜೆಪಿ ಮುಖಂಡರಾದ ಸಿ.ಎಂ. ನಾಗರಾಜು, ನಿಸರ್ಗ ಕೆಂಪರಾಜು, ಎಂ.ಕೆ. ಜಗದೀಶ್, ವೆಂಕಟೇಶ್ (ವೆಂಕಿ), ಕೌಸಲ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>