<p><strong>ಬೆಂಗಳೂರು</strong>: ‘ಆಧಾರ್ ನೋಂದಣಿ, ಎಪಿಎಲ್ ಕಾರ್ಡ್ ಮತ್ತು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸೇವೆಗಳನ್ನು ಸಕಾಲ ಯೋಜನೆಯ ‘ಜನಸೇವಕ’ ಅಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಹೀಗಾಗಿ, ಈ ಸೇವೆಗಳನ್ನು ಶೀಘ್ರದಲ್ಲೇ ಈ ವ್ಯಾಪ್ತಿಗೆ ತರಲಾಗುವುದು’ ಎಂದು ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.</p>.<p>ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ ‘ಜನಸೇವಕ’ ಯೋಜನೆಯನ್ನು ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈ ಯೋಜನೆ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಇದರಡಿಯಲ್ಲಿ ಒದಗಿಸಲಾಗುತ್ತಿದೆ.</p>.<p>ಈ ಕುರಿತಂತೆ ಅಧಿಕಾರಿಗಳು ಹಾಗೂ ಬೆಂಗಳೂರು ವ್ಯಾಪ್ತಿಯ ಶಾಸಕರ ಜೊತೆ ಸೋಮವಾರ ಸುರೇಶ್ ಕುಮಾರ್ ಸಭೆ ನಡೆಸಿದರು.</p>.<p>‘ಇತ್ತೀಚೆಗೆ ಎಲ್ಲ ವ್ಯವಹಾರಗಳಿಗೂ ಆಧಾರ್ ಅಗತ್ಯ. ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆಯಲು ಪರದಾಡುವಂತಾಗಿದೆ. ಇದನ್ನು ಪರಿಗಣಿಸಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳನ್ನು ಕೂಡ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ’ ಎಂದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು, ಅನಾರೋಗ್ಯ ಪೀಡಿತರು ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಈ ಸೇವೆಗಳನ್ನು ಮತ್ತೆ ಆರಂಭಿಸಲುನಿರ್ಧರಿಸಲಾಗಿದೆ’ ಎಂದು ಅವರು ಹೇಳಿದರು.</p>.<p>‘ಈ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಸಕರು ಕೈಗೊಳ್ಳಬೇಕು’ ಎಂದೂಮನವಿ ಮಾಡಿದರು.</p>.<p>ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ದಾಸರಹಳ್ಳಿ ಶಾಸಕ ಎಂ. ಮಂಜುನಾಥ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಧಾರ್ ನೋಂದಣಿ, ಎಪಿಎಲ್ ಕಾರ್ಡ್ ಮತ್ತು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸೇವೆಗಳನ್ನು ಸಕಾಲ ಯೋಜನೆಯ ‘ಜನಸೇವಕ’ ಅಡಿ ಒದಗಿಸಲು ಸಂಬಂಧಿಸಿದ ಇಲಾಖೆಗಳು ಸಹಮತ ವ್ಯಕ್ತಪಡಿಸಿವೆ. ಹೀಗಾಗಿ, ಈ ಸೇವೆಗಳನ್ನು ಶೀಘ್ರದಲ್ಲೇ ಈ ವ್ಯಾಪ್ತಿಗೆ ತರಲಾಗುವುದು’ ಎಂದು ಸಕಾಲ ಮಿಷನ್ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.</p>.<p>ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ ‘ಜನಸೇವಕ’ ಯೋಜನೆಯನ್ನು ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈ ಯೋಜನೆ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಇದರಡಿಯಲ್ಲಿ ಒದಗಿಸಲಾಗುತ್ತಿದೆ.</p>.<p>ಈ ಕುರಿತಂತೆ ಅಧಿಕಾರಿಗಳು ಹಾಗೂ ಬೆಂಗಳೂರು ವ್ಯಾಪ್ತಿಯ ಶಾಸಕರ ಜೊತೆ ಸೋಮವಾರ ಸುರೇಶ್ ಕುಮಾರ್ ಸಭೆ ನಡೆಸಿದರು.</p>.<p>‘ಇತ್ತೀಚೆಗೆ ಎಲ್ಲ ವ್ಯವಹಾರಗಳಿಗೂ ಆಧಾರ್ ಅಗತ್ಯ. ಹಿರಿಯ ನಾಗರಿಕರು, ಅಸಹಾಯಕರು ಈ ಸೇವೆಗಳನ್ನು ಪಡೆಯಲು ಪರದಾಡುವಂತಾಗಿದೆ. ಇದನ್ನು ಪರಿಗಣಿಸಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳನ್ನು ಕೂಡ ಜನಸೇವಕ ವ್ಯಾಪ್ತಿಗೆ ತರಲಾಗುತ್ತಿದೆ’ ಎಂದರು.</p>.<p>‘ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವೃದ್ಧರು, ಅನಾರೋಗ್ಯ ಪೀಡಿತರು ಮನೆಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಎಲ್ಲ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಈ ಸೇವೆಗಳನ್ನು ಮತ್ತೆ ಆರಂಭಿಸಲುನಿರ್ಧರಿಸಲಾಗಿದೆ’ ಎಂದು ಅವರು ಹೇಳಿದರು.</p>.<p>‘ಈ ಸೇವೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಸಕರು ಕೈಗೊಳ್ಳಬೇಕು’ ಎಂದೂಮನವಿ ಮಾಡಿದರು.</p>.<p>ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ದಾಸರಹಳ್ಳಿ ಶಾಸಕ ಎಂ. ಮಂಜುನಾಥ್ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>