ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ ‘ಜನಸೇವಕ’ ಯೋಜನೆಯನ್ನು ಕೋವಿಡ್ 19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈ ಯೋಜನೆ ರಾಜಾಜಿನಗರ, ಬೊಮ್ಮನಹಳ್ಳಿ, ಮಹದೇವಪುರ ಮತ್ತು ದಾಸರಹಳ್ಳಿ ಕ್ಷೇತ್ರಗಳಲ್ಲಿ ಜಾರಿಯಲ್ಲಿದೆ. ಆದಾಯ, ಜಾತಿ ಪ್ರಮಾಣಪತ್ರ, ಹಿರಿಯ ನಾಗರಿಕರ ಪಿಂಚಣಿ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇರಿದಂತೆ 50 ಸೇವೆಗಳನ್ನು ಇದರಡಿಯಲ್ಲಿ ಒದಗಿಸಲಾಗುತ್ತಿದೆ.