<p><strong>ಬೆಂಗಳೂರು</strong>: ನಗರದ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಂಸ್ಥಾಪಕ ಟ್ರಸ್ಟಿಯೂ ಆಗಿರುವ ವೈದ್ಯ ಡಾ. ಎಲ್. ಶಿವಲಿಂಗಯ್ಯ ಅವರ ಕೊಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಅನಾರೋಗ್ಯದಿಂದ ಬಳಲುತ್ತಿರುವ ಶಿವಲಿಂಗಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕೊಲೆಗೆ ಯತ್ನ ನಡೆದಿರುವ ಬಗ್ಗೆ ಮಗ ಡಾ. ರವಿ ಪ್ರಕಾಶ್ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.</p>.<p>‘ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದ್ದರಿಂದ ಶಿವಲಿಂಗಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ದೇಹದಲ್ಲಿ ಅಲ್ಪಪ್ರಮಾಣದಲ್ಲಿ ವಿಷದ ಅಂಶವಿರುವುದು ಪತ್ತೆಯಾಗಿದೆ. ಅದೇ ಅನುಮಾನದಲ್ಲಿ ಪುತ್ರ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆಸ್ತಿ ವಿಚಾರವಾಗಿ ಕುಟುಂಬದವರ ನಡುವೆ ವ್ಯಾಜ್ಯವಿದೆ. ಆಸ್ತಿ ಕಬಳಿಸುವ ಉದ್ದೇಶದಿಂದ ವಿಷ ಹಾಕಿರುವ ಆರೋಪವೂ ಕೇಳಿಬರುತ್ತಿದೆ. ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಂಸ್ಥಾಪಕ ಟ್ರಸ್ಟಿಯೂ ಆಗಿರುವ ವೈದ್ಯ ಡಾ. ಎಲ್. ಶಿವಲಿಂಗಯ್ಯ ಅವರ ಕೊಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಅನಾರೋಗ್ಯದಿಂದ ಬಳಲುತ್ತಿರುವ ಶಿವಲಿಂಗಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕೊಲೆಗೆ ಯತ್ನ ನಡೆದಿರುವ ಬಗ್ಗೆ ಮಗ ಡಾ. ರವಿ ಪ್ರಕಾಶ್ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.</p>.<p>‘ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದ್ದರಿಂದ ಶಿವಲಿಂಗಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ನಡೆಸಿದಾಗ, ದೇಹದಲ್ಲಿ ಅಲ್ಪಪ್ರಮಾಣದಲ್ಲಿ ವಿಷದ ಅಂಶವಿರುವುದು ಪತ್ತೆಯಾಗಿದೆ. ಅದೇ ಅನುಮಾನದಲ್ಲಿ ಪುತ್ರ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆಸ್ತಿ ವಿಚಾರವಾಗಿ ಕುಟುಂಬದವರ ನಡುವೆ ವ್ಯಾಜ್ಯವಿದೆ. ಆಸ್ತಿ ಕಬಳಿಸುವ ಉದ್ದೇಶದಿಂದ ವಿಷ ಹಾಕಿರುವ ಆರೋಪವೂ ಕೇಳಿಬರುತ್ತಿದೆ. ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>