<p><strong>ಬೆಂಗಳೂರು:</strong> ಪೌರಕಾರ್ಮಿಕರು, ಕಸ ಸಂಗ್ರಹಿಸುವ ಆಟೊ ಟಿಪ್ಪರ್ ಚಾಲಕರು, ಸಹಾಯಕರಿಗೆ ಸಕಾಲದಲ್ಲಿ ವೇತನ ನೀಡದೆ ತೊಂದರೆ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಸೂಚಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಲೋಡರ್ಸ್, ಕ್ಲೀನರ್ಸ್ ಮತ್ತು ಡ್ರೈವರ್ಸ್ ಅವರೊಂದಿಗೆ ಶುಕ್ರವಾರ ಗೋವಿಂದರಾಜನಗರದಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆದ ನೇರ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ನೀಡುವಲ್ಲಿ ಹಲವಾರು ತಾಂತ್ರಿಕ ತಪ್ಪುಗಳು, ಜನ್ಮದಿನಾಂಕ, ಜನ್ಮಸ್ಥಳ ತಪ್ಪು ನಮೂದು ಮತ್ತು ಸಿಂಧುತ್ವ ಇರದೇ ವಿಳಂಬವಾಗುತ್ತಿದೆ ಎಂದು ಪೌರಕಾರ್ಮಿಕರಾದ ಆಂಜಿನಮ್ಮ ದೂರಿದರು.</p>.<p>ಪಾಲಿಕೆ ವತಿಯಿಂದ ಕಂದಾಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಶೇಷ ಶಿಬಿರ ಆಯೋಜಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು. ಜನ್ಮದಿನಾಂಕದ ತಪ್ಪುಗಳನ್ನು ಸರಿಪಡಿಸಲಾಗುವುದು ಎಂದು ಪಾಲಿಕೆಯ ಆಯುಕ್ತ ಕೆ.ವಿ. ರಾಜೇಂದ್ರ ಭರವಸೆ ನೀಡಿದರು.</p>.<p>ಪೌರಕಾರ್ಮಿಕರಿಂದ ನಿಯಮಬಾಹಿರವಾಗಿ ಕಸ ವಿಂಗಡಣೆ ಮಾಡಿಸುವ ಕೆಲಸ ಮಾಡಿಸಲಾಗುತ್ತಿದೆ. ನಿರಾಕರಿಸಿದರೆ ಕೆಲಸದಿಂದ ಹೊರಹಾಕಲಾಗುವುದು ಎಂದು ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕಾರ್ಮಿಕರು ಆಯೋಗದ ಗಮನಕ್ಕೆ ತಂದರು. ಮೇಲ್ವಿಚಾರಕರಿಗೆ ಆಯುಕ್ತರು ಎಚ್ಚರಿಕೆ ನೀಡಿದರು.</p>.<p>ನಗರದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರಿಗೆ ಸಾರ್ವಜನಿಕರಿಂದ ದೈಹಿಕ ಹಲ್ಲೆ ಹಾಗೂ ಬೈಗುಳ ಅನುಭವಿಸುವ ಕೆಲವು ಪ್ರಕರಣಗಳು ಕಂಡುಬಂದಿದ್ದು ಹಿರಿಯ ಅಧಿಕಾರಿಗಳು ಸಕಾಲದಲ್ಲಿ ನೆರವಿಗೆ ಬರಬೇಕು, ಪೌರಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಆಯೋಗದ ಅಧ್ಯಕ್ಷರು ತಿಳಿಸಿದರು.</p>.<p>ಪಶ್ಚಿಮ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ದಿಗ್ವಿಜಯ್ ಬೋಡ್ಕೆ, ಆಯೋಗದ ಕಾರ್ಯದರ್ಶಿ ಸುಮಯ್ಯಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೌರಕಾರ್ಮಿಕರು, ಕಸ ಸಂಗ್ರಹಿಸುವ ಆಟೊ ಟಿಪ್ಪರ್ ಚಾಲಕರು, ಸಹಾಯಕರಿಗೆ ಸಕಾಲದಲ್ಲಿ ವೇತನ ನೀಡದೆ ತೊಂದರೆ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ಸೂಚಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಲೋಡರ್ಸ್, ಕ್ಲೀನರ್ಸ್ ಮತ್ತು ಡ್ರೈವರ್ಸ್ ಅವರೊಂದಿಗೆ ಶುಕ್ರವಾರ ಗೋವಿಂದರಾಜನಗರದಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆದ ನೇರ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ನೀಡುವಲ್ಲಿ ಹಲವಾರು ತಾಂತ್ರಿಕ ತಪ್ಪುಗಳು, ಜನ್ಮದಿನಾಂಕ, ಜನ್ಮಸ್ಥಳ ತಪ್ಪು ನಮೂದು ಮತ್ತು ಸಿಂಧುತ್ವ ಇರದೇ ವಿಳಂಬವಾಗುತ್ತಿದೆ ಎಂದು ಪೌರಕಾರ್ಮಿಕರಾದ ಆಂಜಿನಮ್ಮ ದೂರಿದರು.</p>.<p>ಪಾಲಿಕೆ ವತಿಯಿಂದ ಕಂದಾಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಶೇಷ ಶಿಬಿರ ಆಯೋಜಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು. ಜನ್ಮದಿನಾಂಕದ ತಪ್ಪುಗಳನ್ನು ಸರಿಪಡಿಸಲಾಗುವುದು ಎಂದು ಪಾಲಿಕೆಯ ಆಯುಕ್ತ ಕೆ.ವಿ. ರಾಜೇಂದ್ರ ಭರವಸೆ ನೀಡಿದರು.</p>.<p>ಪೌರಕಾರ್ಮಿಕರಿಂದ ನಿಯಮಬಾಹಿರವಾಗಿ ಕಸ ವಿಂಗಡಣೆ ಮಾಡಿಸುವ ಕೆಲಸ ಮಾಡಿಸಲಾಗುತ್ತಿದೆ. ನಿರಾಕರಿಸಿದರೆ ಕೆಲಸದಿಂದ ಹೊರಹಾಕಲಾಗುವುದು ಎಂದು ಬೆದರಿಕೆ ಒಡ್ಡಲಾಗುತ್ತಿದೆ ಎಂದು ಕಾರ್ಮಿಕರು ಆಯೋಗದ ಗಮನಕ್ಕೆ ತಂದರು. ಮೇಲ್ವಿಚಾರಕರಿಗೆ ಆಯುಕ್ತರು ಎಚ್ಚರಿಕೆ ನೀಡಿದರು.</p>.<p>ನಗರದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರಿಗೆ ಸಾರ್ವಜನಿಕರಿಂದ ದೈಹಿಕ ಹಲ್ಲೆ ಹಾಗೂ ಬೈಗುಳ ಅನುಭವಿಸುವ ಕೆಲವು ಪ್ರಕರಣಗಳು ಕಂಡುಬಂದಿದ್ದು ಹಿರಿಯ ಅಧಿಕಾರಿಗಳು ಸಕಾಲದಲ್ಲಿ ನೆರವಿಗೆ ಬರಬೇಕು, ಪೌರಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕು ಎಂದು ಆಯೋಗದ ಅಧ್ಯಕ್ಷರು ತಿಳಿಸಿದರು.</p>.<p>ಪಶ್ಚಿಮ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ದಿಗ್ವಿಜಯ್ ಬೋಡ್ಕೆ, ಆಯೋಗದ ಕಾರ್ಯದರ್ಶಿ ಸುಮಯ್ಯಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>