<p><strong>ಬೆಂಗಳೂರು</strong>: ಒಳಚರಂಡಿ ಮತ್ತು ಗುಂಡಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿಗಳ ಸಾವು ಮತ್ತು ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಲಮಂಡಳಿಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿದೆ.</p>.<p>ದಿನಕ್ಕೆ ಮೂರು ಸ್ಥಳದಲ್ಲಿ ಈ ನಾಟಕಗಳು ಪ್ರದರ್ಶನಗೊಳ್ಳಲಿವೆ. ಈ ತಿಂಗಳ ಕೊನೆಯವರೆಗೆ ಪ್ರದರ್ಶನ ನಡೆಯಲಿದೆ ಎಂದು ಅದು ಹೇಳಿದೆ.</p>.<p>ಸಾರ್ವಜನಿಕರು ಅಷ್ಟೇ ಅಲ್ಲದೆ, ಸಫಾಯಿ ಕರ್ಮಚಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳಲ್ಲಿ ಅರಿವು ಮೂಡಿಸಲು ಮತ್ತು ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಲುವಾಗಿ ವಿಚಾರ ವಿನಿಮಯ ಕಾರ್ಯಕ್ರಮಗಳ ಮೂಲಕ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ಮಂಡಳಿಯು ತಮಟೆ ಗ್ರಾಮೀಣ ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ರಕ್ಷೆ-ಸುರಕ್ಷೆ ಎಂಬ ಘೋಷವಾಕ್ಯದಡಿಯಲ್ಲಿ ಈ ಅಭಿಯಾನ ನಡೆಸುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸುವ ಕೆಲಸ ಈ ಬೀದಿ ನಾಟಕಗಳ ಮೂಲಕ ಆಗಲಿದೆ ಎಂದು ಮಂಡಳಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಒಳಚರಂಡಿ ಮತ್ತು ಗುಂಡಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿಗಳ ಸಾವು ಮತ್ತು ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಲಮಂಡಳಿಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿದೆ.</p>.<p>ದಿನಕ್ಕೆ ಮೂರು ಸ್ಥಳದಲ್ಲಿ ಈ ನಾಟಕಗಳು ಪ್ರದರ್ಶನಗೊಳ್ಳಲಿವೆ. ಈ ತಿಂಗಳ ಕೊನೆಯವರೆಗೆ ಪ್ರದರ್ಶನ ನಡೆಯಲಿದೆ ಎಂದು ಅದು ಹೇಳಿದೆ.</p>.<p>ಸಾರ್ವಜನಿಕರು ಅಷ್ಟೇ ಅಲ್ಲದೆ, ಸಫಾಯಿ ಕರ್ಮಚಾರಿಗಳು ಹಾಗೂ ಸ್ಥಳಿಯ ಸಂಸ್ಥೆಗಳಲ್ಲಿ ಅರಿವು ಮೂಡಿಸಲು ಮತ್ತು ಮಲ ಹೊರುವ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಲುವಾಗಿ ವಿಚಾರ ವಿನಿಮಯ ಕಾರ್ಯಕ್ರಮಗಳ ಮೂಲಕ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ಮಂಡಳಿಯು ತಮಟೆ ಗ್ರಾಮೀಣ ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ರಕ್ಷೆ-ಸುರಕ್ಷೆ ಎಂಬ ಘೋಷವಾಕ್ಯದಡಿಯಲ್ಲಿ ಈ ಅಭಿಯಾನ ನಡೆಸುತ್ತಿದೆ. ಸುರಕ್ಷತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸುವ ಕೆಲಸ ಈ ಬೀದಿ ನಾಟಕಗಳ ಮೂಲಕ ಆಗಲಿದೆ ಎಂದು ಮಂಡಳಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>