<p><strong>ಬೆಂಗಳೂರು: </strong>ಮಹಿಳೆಯರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅದರ ಜಾರಿ ಉದ್ದೇಶದಿಂದ ನಗರದ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ‘ಸುರಕ್ಷಿತ ನಗರ’ ವಿಷಯದಡಿ ಸಮ್ಮೇಳನ ನಡೆಯಿತು.</p>.<p>ಹನ್ಸ್ ಸೇಡೆಲ್ ಹಾಗೂ ಜನಾಗ್ರಹ ಸೆಂಟರ್ ಫಾರ್ ಸಿಟಿಜನ್ಶಿಪ್ ಆ್ಯಂಡ್ ಡೆಮಾಕ್ರಸಿ ಸಂಘಟನೆಗಳ ಸಹಯೋಗದಲ್ಲಿನಗರದ ಪೊಲೀಸರು ಈ ಸಮ್ಮೇಳನ ಹಮ್ಮಿಕೊಂಡಿದ್ದರು.</p>.<p>ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಸವಾಲುಗಳು ಹಾಗೂ ನೆರೆಹೊರೆಯ ಸುರಕ್ಷತೆ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಲಾಯಿತು.</p>.<p>ಕಮಿಷನರ್ ಭಾಸ್ಕರ್ ರಾವ್, ‘ಮಹಿಳೆಯರ ಸುರಕ್ಷತೆಯು ಮಾನವೀಯ ಸವಾಲು ಮಾತ್ರವಲ್ಲದೇ ಪ್ರಮುಖ ಆರ್ಥಿಕ ಸವಾಲುಗಳಲ್ಲಿ ಒಂದಾಗಿದೆ. ಬೆಂಗಳೂರಿನಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.</p>.<p>ನಿವೃತ್ತ ಡಿಜಿಪಿ ಎಸ್.ಟಿ.ರಮೇಶ್, ‘ಹಿಂಸೆ ಮತ್ತು ಲೈಂಗಿಕ ಕಿರುಕುಳ ತಡೆಗಟ್ಟಬೇಕು. ನಗರದ ಬೀದಿಗಳಲ್ಲಿ ಮಹಿಳೆಯರು ಧೈರ್ಯವಾಗಿ ನಡೆಯುವಂತೆ ಮಾಡಬೇಕು’ ಎಂದರು.</p>.<p>ಜನಾಗ್ರಹ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್, ‘ನಗರದ 108 ಠಾಣೆಗಳಲ್ಲಿ ಸಮುದಾಯ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆ. 650ಕ್ಕೂ ಹೆಚ್ಚು ಸುರಕ್ಷಾ ಮಿತ್ರರು ಇದ್ದಾರೆ. ಅವರೆಲ್ಲ ಸೇರಿ ಸುರಕ್ಷಿತ ನಗರ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಹಿಳೆಯರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅದರ ಜಾರಿ ಉದ್ದೇಶದಿಂದ ನಗರದ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ‘ಸುರಕ್ಷಿತ ನಗರ’ ವಿಷಯದಡಿ ಸಮ್ಮೇಳನ ನಡೆಯಿತು.</p>.<p>ಹನ್ಸ್ ಸೇಡೆಲ್ ಹಾಗೂ ಜನಾಗ್ರಹ ಸೆಂಟರ್ ಫಾರ್ ಸಿಟಿಜನ್ಶಿಪ್ ಆ್ಯಂಡ್ ಡೆಮಾಕ್ರಸಿ ಸಂಘಟನೆಗಳ ಸಹಯೋಗದಲ್ಲಿನಗರದ ಪೊಲೀಸರು ಈ ಸಮ್ಮೇಳನ ಹಮ್ಮಿಕೊಂಡಿದ್ದರು.</p>.<p>ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಸವಾಲುಗಳು ಹಾಗೂ ನೆರೆಹೊರೆಯ ಸುರಕ್ಷತೆ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಲಾಯಿತು.</p>.<p>ಕಮಿಷನರ್ ಭಾಸ್ಕರ್ ರಾವ್, ‘ಮಹಿಳೆಯರ ಸುರಕ್ಷತೆಯು ಮಾನವೀಯ ಸವಾಲು ಮಾತ್ರವಲ್ಲದೇ ಪ್ರಮುಖ ಆರ್ಥಿಕ ಸವಾಲುಗಳಲ್ಲಿ ಒಂದಾಗಿದೆ. ಬೆಂಗಳೂರಿನಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.</p>.<p>ನಿವೃತ್ತ ಡಿಜಿಪಿ ಎಸ್.ಟಿ.ರಮೇಶ್, ‘ಹಿಂಸೆ ಮತ್ತು ಲೈಂಗಿಕ ಕಿರುಕುಳ ತಡೆಗಟ್ಟಬೇಕು. ನಗರದ ಬೀದಿಗಳಲ್ಲಿ ಮಹಿಳೆಯರು ಧೈರ್ಯವಾಗಿ ನಡೆಯುವಂತೆ ಮಾಡಬೇಕು’ ಎಂದರು.</p>.<p>ಜನಾಗ್ರಹ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ವಿಶ್ವನಾಥನ್, ‘ನಗರದ 108 ಠಾಣೆಗಳಲ್ಲಿ ಸಮುದಾಯ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆ. 650ಕ್ಕೂ ಹೆಚ್ಚು ಸುರಕ್ಷಾ ಮಿತ್ರರು ಇದ್ದಾರೆ. ಅವರೆಲ್ಲ ಸೇರಿ ಸುರಕ್ಷಿತ ನಗರ ನಿರ್ಮಾಣ ಮಾಡುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>