<p><strong>ಬೆಂಗಳೂರು:</strong> ‘ಕೇಸರಿ ಕೃಷಿಯು ಲಾಭದಾಯಕವಾಗಿದ್ದು, ಇದಕ್ಕೆ ಉತ್ತೇಜನ ನೀಡಲು ಸರ್ಕಾರವು ಕೃಷಿಕರಿಗೆ ಅಗತ್ಯ ಸೌಲಭ್ಯ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದು ಕರ್ನಾಟಕ ಕೇಸರಿ ರೈತರ ಸಂಘ ಆಗ್ರಹಿಸಿದೆ. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಲೋಕೇಶ್ ಆರ್., ‘ಕರ್ನಾಟಕದಲ್ಲಿ 40 ಮಂದಿ ಕೇಸರಿ ಬೆಳೆಯುತ್ತಿದ್ದಾರೆ. ಬೆಂಗಳೂರಿನಲ್ಲಿಯೇ 30 ಮಂದಿ ಬೆಳೆಗಾರರಿದ್ದಾರೆ. ಈ ಬೆಳೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಸೂಕ್ತ ಮಾರ್ಗದರ್ಶನವೂ ಸಿಗದ ಪರಿಣಾಮ, ಕೆಲವರು ಈ ಕೃಷಿಯಲ್ಲಿ ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಕಳಪೆ ಗುಣಮಟ್ಟದ ಕೇಸರಿ ಮಾರುಕಟ್ಟೆ ಪ್ರವೇಶಿಸುತ್ತಿದೆ. ಗುಣಮಟ್ಟದ ಕೇಸರಿ ಬೆಲೆ ಪ್ರತಿ ಗ್ರಾಂಗೆ ₹2 ಸಾವಿರ ತಲುಪಿದ್ದು, ಈ ಸಂದರ್ಭದಲ್ಲಿ ಸ್ಥಳೀಯವಾಗಿ ಬೆಳೆಯಲು ಪ್ರೋತ್ಸಾಹ ಅಗತ್ಯ’ ಎಂದು ಹೇಳಿದರು. </p>.<p>‘ಕೇಸರಿಯು ಔಷಧ ಗುಣಗಳನ್ನು ಒಳಗೊಂಡಿದೆ. ನಾವು ಬೆಳೆಯುತ್ತಿರುವ ಕೇಸರಿಯನ್ನು ಸ್ಥಳೀಯವಾಗಿಯೇ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುತ್ತಿದ್ದೇವೆ. ಇದರ ಮೌಲ್ಯವರ್ಧನೆಯಿಂದ ಹೆಚ್ಚಿನ ಆದಾಯ ಗಳಿಸಲು ಸಾಧ್ಯ. ಆದರೆ, ಮಧ್ಯವರ್ತಿಗಳ ಹಾವಳಿ, ಕಳಪೆ ಗುಣಪಟ್ಟದ ಗಡ್ಡೆಯಿಂದಾಗಿ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬೆಳೆ ಹೆಚ್ಚಿನ ಶ್ರಮ ಬಯಸದ ಕಾರಣ, ಉಪ ಬೆಳೆಗಳಿಗೂ ಆದ್ಯತೆ ನೀಡಬೇಕು. ಈ ಬೆಳೆಯಲ್ಲಿ ಆಸಕ್ತಿ ಇರುವವರಿಗೆ ನಮ್ಮ ಸಂಘ ಅಗತ್ಯ ಮಾರ್ಗದರ್ಶನ ಒದಗಿಸಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೇಸರಿ ಕೃಷಿಯು ಲಾಭದಾಯಕವಾಗಿದ್ದು, ಇದಕ್ಕೆ ಉತ್ತೇಜನ ನೀಡಲು ಸರ್ಕಾರವು ಕೃಷಿಕರಿಗೆ ಅಗತ್ಯ ಸೌಲಭ್ಯ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದು ಕರ್ನಾಟಕ ಕೇಸರಿ ರೈತರ ಸಂಘ ಆಗ್ರಹಿಸಿದೆ. </p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಲೋಕೇಶ್ ಆರ್., ‘ಕರ್ನಾಟಕದಲ್ಲಿ 40 ಮಂದಿ ಕೇಸರಿ ಬೆಳೆಯುತ್ತಿದ್ದಾರೆ. ಬೆಂಗಳೂರಿನಲ್ಲಿಯೇ 30 ಮಂದಿ ಬೆಳೆಗಾರರಿದ್ದಾರೆ. ಈ ಬೆಳೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಸೂಕ್ತ ಮಾರ್ಗದರ್ಶನವೂ ಸಿಗದ ಪರಿಣಾಮ, ಕೆಲವರು ಈ ಕೃಷಿಯಲ್ಲಿ ಕೈ ಸುಟ್ಟುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಕಳಪೆ ಗುಣಮಟ್ಟದ ಕೇಸರಿ ಮಾರುಕಟ್ಟೆ ಪ್ರವೇಶಿಸುತ್ತಿದೆ. ಗುಣಮಟ್ಟದ ಕೇಸರಿ ಬೆಲೆ ಪ್ರತಿ ಗ್ರಾಂಗೆ ₹2 ಸಾವಿರ ತಲುಪಿದ್ದು, ಈ ಸಂದರ್ಭದಲ್ಲಿ ಸ್ಥಳೀಯವಾಗಿ ಬೆಳೆಯಲು ಪ್ರೋತ್ಸಾಹ ಅಗತ್ಯ’ ಎಂದು ಹೇಳಿದರು. </p>.<p>‘ಕೇಸರಿಯು ಔಷಧ ಗುಣಗಳನ್ನು ಒಳಗೊಂಡಿದೆ. ನಾವು ಬೆಳೆಯುತ್ತಿರುವ ಕೇಸರಿಯನ್ನು ಸ್ಥಳೀಯವಾಗಿಯೇ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುತ್ತಿದ್ದೇವೆ. ಇದರ ಮೌಲ್ಯವರ್ಧನೆಯಿಂದ ಹೆಚ್ಚಿನ ಆದಾಯ ಗಳಿಸಲು ಸಾಧ್ಯ. ಆದರೆ, ಮಧ್ಯವರ್ತಿಗಳ ಹಾವಳಿ, ಕಳಪೆ ಗುಣಪಟ್ಟದ ಗಡ್ಡೆಯಿಂದಾಗಿ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬೆಳೆ ಹೆಚ್ಚಿನ ಶ್ರಮ ಬಯಸದ ಕಾರಣ, ಉಪ ಬೆಳೆಗಳಿಗೂ ಆದ್ಯತೆ ನೀಡಬೇಕು. ಈ ಬೆಳೆಯಲ್ಲಿ ಆಸಕ್ತಿ ಇರುವವರಿಗೆ ನಮ್ಮ ಸಂಘ ಅಗತ್ಯ ಮಾರ್ಗದರ್ಶನ ಒದಗಿಸಲಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>