‘ಕರ್ನಾಟಕ ಸರ್ಕಾರದ ಆದೇಶದಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಮಲ್ಲತ್ತಹಳ್ಳಿಯಲ್ಲಿ ಒಂದು ಎಕರೆಯನ್ನು ಗುತ್ತಿಗೆ ಆಧಾರದಲ್ಲಿ ನೀಡಿದೆ. ಅಕಾಡೆಮಿಯ ಕಾರ್ಯಕಾರಿ ಸಮಿತಿಯ ನಿರ್ಣಯವನ್ನು ಒಪ್ಪಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅನುದಾನ ಬಂದ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು. ಸದ್ಯ ಗುತ್ತಿಗೆ ನಿಯಮದಂತೆ ತನ್ನ ಕಾರ್ಯವನ್ನು ಸೆಂಟ್ರಲ್ ಕಾಲೇಜಿನ ಗ್ರಂಥಾಲಯದ ಕಟ್ಟಡದಲ್ಲಿ ಮುಂದುವರಿಸಲು ಅನುಮತಿ ನೀಡಬೇಕು. ಅಕಾಡೆಮಿಯ ವಿರುದ್ಧ ವಿಶ್ವವಿದ್ಯಾಲಯವು ನ್ಯಾಯಾಲಯದಲ್ಲಿ ಹೂಡಿರುವ ದಾವೆಯನ್ನು ಹಿಂತೆಗೆದುಕೊಳ್ಳುವಂತೆ ಸೂಚನೆ ನೀಡಬೇಕು’ ಎಂದು ಮನವಿ ಮಾಡಲಾಗಿದೆ.