ಅಕಾಡೆಮಿಯ ಅಧ್ಯಕ್ಷ ಅರವಿಂದ ಮಾಲಗತ್ತಿ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಸಮಾವೇಶದಲ್ಲಿ 170ಕ್ಕೂ ಹೆಚ್ಚಿನ ಸಾಹಿತಿಗಳು ಭಾಗವಹಿಸಲಿದ್ದಾರೆ. ಸಾಮಾನ್ಯವಾಗಿ ಎಲ್ಲ ಕಾರ್ಯಕ್ರಮಗಳಲ್ಲಿ ವಿದ್ವಾಂಸರು ಹಾಗೂ ಸಾಹಿತ್ಯ ದಿಗ್ಗಜರು ವೇದಿಕೆಯಲ್ಲಿ ಇರುತ್ತಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಸಾಹಿತಿಗಳು ಎಲ್ಲರೊಡನೆ ಬೆರೆತು ಮುಕ್ತ ಚರ್ಚೆ ನಡೆಸಲಿದ್ದಾರೆ’ ಎಂದರು.