ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ‘ಆಸ್ಪತ್ರೆಯವರು ಬರೆದಿರುವ ಪತ್ರ ಇನ್ನೂ ಕೈಸೇರಿಲ್ಲ. ನಾವು ಈಗಾಗಲೇ ಮೊಕದ್ದಮೆ ದಾಖಲಿಸಿದ್ದೇವೆ. ಪೊಲೀಸರು ತನಿಖೆ ನಡೆಸಿ ಏನು ಕ್ರಮ ಕೈಗೊಳ್ಳುತ್ತಾರೋ ನೋಡೋಣ. ಅವರು ಶೇ 50ರಷ್ಟು ಹಾಸಿಗೆಗಳನ್ನು ಸರ್ಕಾರ ಸೂಚಿಸಿದ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಟ್ಟರೆ ಒಳ್ಳೆಯದು’ ಎಂದರು.