<p><strong>ರಾಜರಾಜೇಶ್ವರಿನಗರ:</strong> ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದಲ್ಲಿ ನಾಲ್ಕು ದಿನಗಳು ಕೊಟ್ಟಿಗೆಪಾಳ್ಯ ದಸರಾ ಮಹೋತ್ಸವ, ಊರಹಬ್ಬ, ಸಲ್ಲಾಪುರದಮ್ಮ ದೇವಿಯ ಉತ್ಸವ ಹಾಗೂ ಜಾತ್ರಾಮಹೋತ್ಸವ ಅದ್ದೂರಿಯಾಗಿ ನೆರವೇರಿತು.</p>.<p>ಕೊಟ್ಟಿಗೆಪಾಳ್ಯದಾದ್ಯಂತ ವಿದ್ಯುತ್ ದೀಪಾಲಂಕಾರ, ಬಣ್ಣದ-ಬಣ್ಣದ ತೋರಣಗಳಿಂದ ಸಿಂಗರಿಸಲಾಗಿತ್ತು. ಸಲ್ಲಾಪುರದಮ್ಮ ದೇವಸ್ಥಾನದ ಸುತ್ತ ತಳಿರು ತೋರಣ, ಬಾಳೆಕಂದುಗಳಿಂದ ಸಿಂಗರಿಸಲಾಗಿತ್ತು. 13 ವರ್ಷಗಳ ನಂತರ ಕೊಟ್ಟಿಗೆಪಾಳ್ಯ ದಸರಾಕ್ಕೆ ಜನಸಾಗರವೇ ಹರಿದುಬಂದಿತ್ತು.</p>.<p>ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ, ಸಲ್ಲಾಪುರದಮ್ಮ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಎನ್.ಶೇಖರ್ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ರಾಜರಾಜೇಶ್ವರಿನಗರ ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಗ್ರಾಮದ ಎಲ್ಲಾ ಮುಖಂಡರು ಉತ್ಸವಕ್ಕೆ ಸಾಥ್ ನೀಡಿದರು. </p>.<p>ವಿವಿಧ ಜಾನಪದ ಕಲಾತಂಡಗಳು ಉತ್ಸವಕ್ಕೆ ಮೆರಗು ನೀಡಿದವು. ಪ್ರತಿ ಮನೆಯಿಂದ ಮಹಿಳೆಯರು ತಂಬಿಟ್ಟು, ಬೆಲ್ಲದ ಆರತಿ ತಂದು ದೇವರಿಗೆ ಅರ್ಪಿಸಿದರು. ಪ್ರಧಾನ ಅರ್ಚಕ ಭಾಸ್ಕರ್ ಅವರ ನೇತೃತ್ವದಲ್ಲಿ ಅಗ್ನಿಕೊಂಡ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಮಾಗಡಿ ರಸ್ತೆಯ ಕೊಟ್ಟಿಗೆಪಾಳ್ಯದಲ್ಲಿ ನಾಲ್ಕು ದಿನಗಳು ಕೊಟ್ಟಿಗೆಪಾಳ್ಯ ದಸರಾ ಮಹೋತ್ಸವ, ಊರಹಬ್ಬ, ಸಲ್ಲಾಪುರದಮ್ಮ ದೇವಿಯ ಉತ್ಸವ ಹಾಗೂ ಜಾತ್ರಾಮಹೋತ್ಸವ ಅದ್ದೂರಿಯಾಗಿ ನೆರವೇರಿತು.</p>.<p>ಕೊಟ್ಟಿಗೆಪಾಳ್ಯದಾದ್ಯಂತ ವಿದ್ಯುತ್ ದೀಪಾಲಂಕಾರ, ಬಣ್ಣದ-ಬಣ್ಣದ ತೋರಣಗಳಿಂದ ಸಿಂಗರಿಸಲಾಗಿತ್ತು. ಸಲ್ಲಾಪುರದಮ್ಮ ದೇವಸ್ಥಾನದ ಸುತ್ತ ತಳಿರು ತೋರಣ, ಬಾಳೆಕಂದುಗಳಿಂದ ಸಿಂಗರಿಸಲಾಗಿತ್ತು. 13 ವರ್ಷಗಳ ನಂತರ ಕೊಟ್ಟಿಗೆಪಾಳ್ಯ ದಸರಾಕ್ಕೆ ಜನಸಾಗರವೇ ಹರಿದುಬಂದಿತ್ತು.</p>.<p>ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ, ಸಲ್ಲಾಪುರದಮ್ಮ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಎನ್.ಶೇಖರ್ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ರಾಜರಾಜೇಶ್ವರಿನಗರ ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಗ್ರಾಮದ ಎಲ್ಲಾ ಮುಖಂಡರು ಉತ್ಸವಕ್ಕೆ ಸಾಥ್ ನೀಡಿದರು. </p>.<p>ವಿವಿಧ ಜಾನಪದ ಕಲಾತಂಡಗಳು ಉತ್ಸವಕ್ಕೆ ಮೆರಗು ನೀಡಿದವು. ಪ್ರತಿ ಮನೆಯಿಂದ ಮಹಿಳೆಯರು ತಂಬಿಟ್ಟು, ಬೆಲ್ಲದ ಆರತಿ ತಂದು ದೇವರಿಗೆ ಅರ್ಪಿಸಿದರು. ಪ್ರಧಾನ ಅರ್ಚಕ ಭಾಸ್ಕರ್ ಅವರ ನೇತೃತ್ವದಲ್ಲಿ ಅಗ್ನಿಕೊಂಡ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>