<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ಸಮಾಜಮುಖಿ ಪ್ರಕಾಶನ’ವು ಹಮ್ಮಿಕೊಂಡಿದ್ದ 2025ನೇ ಸಾಲಿನ ಯುವ ಲೇಖನ ಸ್ಪರ್ಧೆಯಲ್ಲಿ ಐದು ಲೇಖನಗಳು ಬಹುಮಾನಕ್ಕೆ ಆಯ್ಕೆಯಾಗಿವೆ. </p>.<p>ಅಂಜಿನಪ್ಪ ಜಿ., ಧನ್ಯ ಎ., ಮಹಮ್ಮದ್ ಷರೀಫ್ ಕಾಡುಮಠ, ಸುನೀಲ್ ನಾಯಕ್ ಹಾಗೂ ಮಮತಾ ಅವರ ಲೇಖನಗಳು ಬಹುಮಾನಕ್ಕೆ ಆಯ್ಕೆಯಾಗಿವೆ. ಬಹುಮಾನವು ತಲಾ ₹ 5 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ‘ಕನ್ನಡಿಗರು ಉದ್ಯಮಶೀಲತೆಯಲ್ಲಿ ಏಕೆ ಹಿಂದೆ ಬಿದ್ದಿದ್ದಾರೆ...?’ ಎಂಬುದು ಸ್ಪರ್ಧೆಯ ವಿಷಯವಾಗಿತ್ತು. ಸ್ಪರ್ಧೆಯ ಅಂತಿಮ ಸುತ್ತಿಗೆ 17 ಲೇಖನಗಳು ಆಯ್ಕೆಯಾಗಿದ್ದವು. </p>.<p>ಮೌನ ವಿ.ಜೆ., ಸಚಿನ್ ಎಂ., ಮುಹಮ್ಮದ್ ಅಜ್ಮಲ್, ಸೀಮಾ ಪ. ಶಿರಗುಪ್ಪಿ, ಉಮ್ಮರ್ ಫಾರೂಕ್ ಎ. ಅವರ ಲೇಖನಗಳು ತೀರ್ಪುಗಾರರ ಮೆಚ್ಚುಗೆಗೆ ಭಾಜನವಾಗಿವೆ. ಕನ್ನಡ ಪರ ಚಿಂತಕ ಗಿರೀಶ್ ಕಾರ್ಗದ್ದೆ ತೀರ್ಪುಗಾರರಾಗಿದ್ದರು. </p>.<p>ನ.9ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬಹುಮಾನ ನೀಡಲಾಗುವುದು ಎಂದು ಪ್ರಕಾಶನದ ಚಂದ್ರಕಾಂತ ವಡ್ಡು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ಸಮಾಜಮುಖಿ ಪ್ರಕಾಶನ’ವು ಹಮ್ಮಿಕೊಂಡಿದ್ದ 2025ನೇ ಸಾಲಿನ ಯುವ ಲೇಖನ ಸ್ಪರ್ಧೆಯಲ್ಲಿ ಐದು ಲೇಖನಗಳು ಬಹುಮಾನಕ್ಕೆ ಆಯ್ಕೆಯಾಗಿವೆ. </p>.<p>ಅಂಜಿನಪ್ಪ ಜಿ., ಧನ್ಯ ಎ., ಮಹಮ್ಮದ್ ಷರೀಫ್ ಕಾಡುಮಠ, ಸುನೀಲ್ ನಾಯಕ್ ಹಾಗೂ ಮಮತಾ ಅವರ ಲೇಖನಗಳು ಬಹುಮಾನಕ್ಕೆ ಆಯ್ಕೆಯಾಗಿವೆ. ಬಹುಮಾನವು ತಲಾ ₹ 5 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ‘ಕನ್ನಡಿಗರು ಉದ್ಯಮಶೀಲತೆಯಲ್ಲಿ ಏಕೆ ಹಿಂದೆ ಬಿದ್ದಿದ್ದಾರೆ...?’ ಎಂಬುದು ಸ್ಪರ್ಧೆಯ ವಿಷಯವಾಗಿತ್ತು. ಸ್ಪರ್ಧೆಯ ಅಂತಿಮ ಸುತ್ತಿಗೆ 17 ಲೇಖನಗಳು ಆಯ್ಕೆಯಾಗಿದ್ದವು. </p>.<p>ಮೌನ ವಿ.ಜೆ., ಸಚಿನ್ ಎಂ., ಮುಹಮ್ಮದ್ ಅಜ್ಮಲ್, ಸೀಮಾ ಪ. ಶಿರಗುಪ್ಪಿ, ಉಮ್ಮರ್ ಫಾರೂಕ್ ಎ. ಅವರ ಲೇಖನಗಳು ತೀರ್ಪುಗಾರರ ಮೆಚ್ಚುಗೆಗೆ ಭಾಜನವಾಗಿವೆ. ಕನ್ನಡ ಪರ ಚಿಂತಕ ಗಿರೀಶ್ ಕಾರ್ಗದ್ದೆ ತೀರ್ಪುಗಾರರಾಗಿದ್ದರು. </p>.<p>ನ.9ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬಹುಮಾನ ನೀಡಲಾಗುವುದು ಎಂದು ಪ್ರಕಾಶನದ ಚಂದ್ರಕಾಂತ ವಡ್ಡು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>