<p><strong>ಬೆಂಗಳೂರು</strong>: ಸಮಾಜಮುಖಿ ಪತ್ರಿಕೆ ವತಿಯಿಂದ ನವೆಂಬರ್ 8 ಮತ್ತು 9ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಆವರಣದಲ್ಲಿ ‘ಸಮಾಜಮುಖಿ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ‘ಕನ್ನಡ ಸಾಹಿತ್ಯದ ಗಂಭೀರ ಚರ್ಚೆ, ವಿಮರ್ಶೆ ಮತ್ತು ಸಂವಾದಕ್ಕೆ ಹೊಸ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ವಾಣಿಜ್ಯೀಕರಣದಿಂದ ಭಿನ್ನವಾದ, ಕೇವಲ ಸಾಹಿತ್ಯಿಕ ಮೌಲ್ಯಕ್ಕೆ ಆದ್ಯತೆ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>‘ಸೃಜನಶೀಲ ಮತ್ತು ವೈಚಾರಿಕ ಬರಹಗಾರರಿಗೆ ಸ್ಫೂರ್ತಿ ನೀಡುವುದರ ಜೊತೆಗೆ ಕನ್ನಡದ ಪ್ರಸ್ತುತ ಬಿಕ್ಕಟ್ಟುಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ’ ಎಂದರು.</p>.<p>‘ಮುಖ್ಯ ಗೋಷ್ಠಿಯ ಜತೆಗೆ ನಾಲ್ಕು ಸಮಾನಾಂತರ ವೇದಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ, ಕಾರ್ಯಾಗಾರ, ವಿಷಯ ಮಂಡನೆ ಮತ್ತು ಯುವ ಬರಹಗಾರರಿಗೆ ತರಬೇತಿ ಆಯೋಜಿಸಲಾಗಿದೆ. ಈ ವೇದಿಕೆಗಳಲ್ಲಿ ಸೃಜನಶೀಲ, ವೈಚಾರಿಕ, ಶಾಸ್ತ್ರೀಯ, ಕನ್ನಡೇತರ ಮತ್ತು ಅಂತರ್ಶಿಸ್ತೀಯ ವಿಷಯದ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ. ಒಂದು ವೇದಿಕೆಯನ್ನು ಸಂಪೂರ್ಣವಾಗಿ ಇಂಗ್ಲಿಷ್ ಭಾಷೆಯ ಚರ್ಚೆಗಾಗಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.</p>.<p><strong>ನೋಂದಣಿ</strong>: ‘ಸಮ್ಮೇಳನದಲ್ಲಿ ಸಾಹಿತಿಗಳು, ವಿಮರ್ಶಕರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಸೇರಿದಂತೆ ಯಾರು ಬೇಕಾದರೂ ಭಾಗವಹಿಸಬಹುದು. ಎಲ್ಲ ಪ್ರತಿನಿಧಿಗಳಿಗೆ ಎರಡು ದಿನಗಳ ಊಟ, ಉಪಾಹಾರದ ವೆಚ್ಚಕ್ಕಾಗಿ ₹ 300 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ’ ಎಂದರು. </p>.<p>‘ಸಮ್ಮೇಳನಕ್ಕೆ ಅಂದಾಜು ₹25 ಲಕ್ಷ ವೆಚ್ಚವಾಗಲಿದ್ದು, ಸರ್ಕಾರದ ಅನುದಾನವಿಲ್ಲದೆ, ಸಂಪೂರ್ಣವಾಗಿ ಸಾಹಿತ್ಯ ಪ್ರೇಮಿಗಳು ಮತ್ತು ದಾನಿಗಳ ದೇಣಿಗೆಯಿಂದ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಮಾಜಮುಖಿ ಪತ್ರಿಕೆ ವತಿಯಿಂದ ನವೆಂಬರ್ 8 ಮತ್ತು 9ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಆವರಣದಲ್ಲಿ ‘ಸಮಾಜಮುಖಿ ಸಾಹಿತ್ಯ ಸಮ್ಮೇಳನ’ ಆಯೋಜಿಸಲಾಗಿದೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ‘ಕನ್ನಡ ಸಾಹಿತ್ಯದ ಗಂಭೀರ ಚರ್ಚೆ, ವಿಮರ್ಶೆ ಮತ್ತು ಸಂವಾದಕ್ಕೆ ಹೊಸ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ವಾಣಿಜ್ಯೀಕರಣದಿಂದ ಭಿನ್ನವಾದ, ಕೇವಲ ಸಾಹಿತ್ಯಿಕ ಮೌಲ್ಯಕ್ಕೆ ಆದ್ಯತೆ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>‘ಸೃಜನಶೀಲ ಮತ್ತು ವೈಚಾರಿಕ ಬರಹಗಾರರಿಗೆ ಸ್ಫೂರ್ತಿ ನೀಡುವುದರ ಜೊತೆಗೆ ಕನ್ನಡದ ಪ್ರಸ್ತುತ ಬಿಕ್ಕಟ್ಟುಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ’ ಎಂದರು.</p>.<p>‘ಮುಖ್ಯ ಗೋಷ್ಠಿಯ ಜತೆಗೆ ನಾಲ್ಕು ಸಮಾನಾಂತರ ವೇದಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ, ಕಾರ್ಯಾಗಾರ, ವಿಷಯ ಮಂಡನೆ ಮತ್ತು ಯುವ ಬರಹಗಾರರಿಗೆ ತರಬೇತಿ ಆಯೋಜಿಸಲಾಗಿದೆ. ಈ ವೇದಿಕೆಗಳಲ್ಲಿ ಸೃಜನಶೀಲ, ವೈಚಾರಿಕ, ಶಾಸ್ತ್ರೀಯ, ಕನ್ನಡೇತರ ಮತ್ತು ಅಂತರ್ಶಿಸ್ತೀಯ ವಿಷಯದ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ. ಒಂದು ವೇದಿಕೆಯನ್ನು ಸಂಪೂರ್ಣವಾಗಿ ಇಂಗ್ಲಿಷ್ ಭಾಷೆಯ ಚರ್ಚೆಗಾಗಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.</p>.<p><strong>ನೋಂದಣಿ</strong>: ‘ಸಮ್ಮೇಳನದಲ್ಲಿ ಸಾಹಿತಿಗಳು, ವಿಮರ್ಶಕರು, ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಸೇರಿದಂತೆ ಯಾರು ಬೇಕಾದರೂ ಭಾಗವಹಿಸಬಹುದು. ಎಲ್ಲ ಪ್ರತಿನಿಧಿಗಳಿಗೆ ಎರಡು ದಿನಗಳ ಊಟ, ಉಪಾಹಾರದ ವೆಚ್ಚಕ್ಕಾಗಿ ₹ 300 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ’ ಎಂದರು. </p>.<p>‘ಸಮ್ಮೇಳನಕ್ಕೆ ಅಂದಾಜು ₹25 ಲಕ್ಷ ವೆಚ್ಚವಾಗಲಿದ್ದು, ಸರ್ಕಾರದ ಅನುದಾನವಿಲ್ಲದೆ, ಸಂಪೂರ್ಣವಾಗಿ ಸಾಹಿತ್ಯ ಪ್ರೇಮಿಗಳು ಮತ್ತು ದಾನಿಗಳ ದೇಣಿಗೆಯಿಂದ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>