ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆ 18ನೇ ಅಡ್ಡರಸ್ತೆ ಜಂಕ್ಷನ್ ಬಳಿ ‘ಗೋಕಾಕ್ ಚಳವಳಿ ಸ್ಮರಣಾರ್ಥ ವೃತ್ತ’ ಹಾಗೂ ‘ಡಾ.ರಾಜಕುಮಾರ’ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೂ ಸಂಪಿಗೆ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ನಟ–ನಟಿಯರು ಭಾಗವಹಿಸುವರು.
‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಬದಲಿ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.
ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
* ಮಲ್ಲೇಶ್ವರದ ಸಂಪಿಗೆ ರಸ್ತೆಯಿಂದ ಯಶವಂತಪುರ ಕಡೆಗೆ ಹೋಗುವ ವಾಹನಗಳು ಸಂಪಿಗೆ ರಸ್ತೆಯ 15ನೇ ಅಡ್ಡರಸ್ತೆಯಲ್ಲಿ ಎಡತಿರುವು ಪಡೆದು 8ನೇ ಮುಖ್ಯರಸ್ತೆಯ ಮೂಲಕ ಹೋಗಬಹುದು
* ಸ್ಯಾಂಕಿ ರಸ್ತೆ ಕಡೆಗೆ ಹೋಗುವ ವಾಹನಗಳು ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿ ಎಡ ತಿರುವು ಪಡೆದು ಸದಾಶಿವನಗರದ ಭಾಷ್ಯಂ ವೃತ್ತದ ಮೂಲಕ ತಲುಪಬಹುದು. ಅಲ್ಲದೆ ಸಂಪಿಗೆ ರಸ್ತೆ 15ನೇ ಅಡ್ಡರಸ್ತೆಯಲ್ಲಿ ಬಲ ತಿರುವು ಪಡೆದು ಕೂಡ ಹೋಗಬಹುದು.