<p><strong>ಬೆಂಗಳೂರು:</strong> ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆ 18ನೇ ಅಡ್ಡರಸ್ತೆ ಜಂಕ್ಷನ್ ಬಳಿ ‘ಗೋಕಾಕ್ ಚಳವಳಿ ಸ್ಮರಣಾರ್ಥ ವೃತ್ತ’ ಹಾಗೂ ‘ಡಾ.ರಾಜಕುಮಾರ’ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.</p>.<p>ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೂ ಸಂಪಿಗೆ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ನಟ–ನಟಿಯರು ಭಾಗವಹಿಸುವರು.</p>.<p>‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಬದಲಿ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.</p>.<p><strong>ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ</strong></p>.<p>* ಮಲ್ಲೇಶ್ವರದ ಸಂಪಿಗೆ ರಸ್ತೆಯಿಂದ ಯಶವಂತಪುರ ಕಡೆಗೆ ಹೋಗುವ ವಾಹನಗಳು ಸಂಪಿಗೆ ರಸ್ತೆಯ 15ನೇ ಅಡ್ಡರಸ್ತೆಯಲ್ಲಿ ಎಡತಿರುವು ಪಡೆದು 8ನೇ ಮುಖ್ಯರಸ್ತೆಯ ಮೂಲಕ ಹೋಗಬಹುದು</p>.<p>* ಸ್ಯಾಂಕಿ ರಸ್ತೆ ಕಡೆಗೆ ಹೋಗುವ ವಾಹನಗಳು ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿ ಎಡ ತಿರುವು ಪಡೆದು ಸದಾಶಿವನಗರದ ಭಾಷ್ಯಂ ವೃತ್ತದ ಮೂಲಕ ತಲುಪಬಹುದು. ಅಲ್ಲದೆ ಸಂಪಿಗೆ ರಸ್ತೆ 15ನೇ ಅಡ್ಡರಸ್ತೆಯಲ್ಲಿ ಬಲ ತಿರುವು ಪಡೆದು ಕೂಡ ಹೋಗಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆ 18ನೇ ಅಡ್ಡರಸ್ತೆ ಜಂಕ್ಷನ್ ಬಳಿ ‘ಗೋಕಾಕ್ ಚಳವಳಿ ಸ್ಮರಣಾರ್ಥ ವೃತ್ತ’ ಹಾಗೂ ‘ಡಾ.ರಾಜಕುಮಾರ’ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.</p>.<p>ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೂ ಸಂಪಿಗೆ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ನಟ–ನಟಿಯರು ಭಾಗವಹಿಸುವರು.</p>.<p>‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಬದಲಿ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.</p>.<p><strong>ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ</strong></p>.<p>* ಮಲ್ಲೇಶ್ವರದ ಸಂಪಿಗೆ ರಸ್ತೆಯಿಂದ ಯಶವಂತಪುರ ಕಡೆಗೆ ಹೋಗುವ ವಾಹನಗಳು ಸಂಪಿಗೆ ರಸ್ತೆಯ 15ನೇ ಅಡ್ಡರಸ್ತೆಯಲ್ಲಿ ಎಡತಿರುವು ಪಡೆದು 8ನೇ ಮುಖ್ಯರಸ್ತೆಯ ಮೂಲಕ ಹೋಗಬಹುದು</p>.<p>* ಸ್ಯಾಂಕಿ ರಸ್ತೆ ಕಡೆಗೆ ಹೋಗುವ ವಾಹನಗಳು ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿ ಎಡ ತಿರುವು ಪಡೆದು ಸದಾಶಿವನಗರದ ಭಾಷ್ಯಂ ವೃತ್ತದ ಮೂಲಕ ತಲುಪಬಹುದು. ಅಲ್ಲದೆ ಸಂಪಿಗೆ ರಸ್ತೆ 15ನೇ ಅಡ್ಡರಸ್ತೆಯಲ್ಲಿ ಬಲ ತಿರುವು ಪಡೆದು ಕೂಡ ಹೋಗಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>