<p><strong>ಬೆಂಗಳೂರು: </strong>ಸಿಗರೇಟ್ ಹಣ ಕೇಳಿದರು ಎಂಬ ಕಾರಣಕ್ಕೆ ರೌಡಿ ಹನೀಫ್ ಎಂಬಾತ ಅಂಗಡಿ ಮಾಲೀಕರಾದ ಮೇಘಲಾ (38) ಎಂಬುವರ ಮೇಲೆ ಕಾದ ಎಣ್ಣೆ ಎರಚಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕೃತ್ಯದಿಂದಾಗಿ ಅಮರಜ್ಯೋತಿ ಲೇಔಟ್ ನಿವಾಸಿ ಮೇಘಲಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಹನೀಫ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಅಮರಜ್ಯೋತಿ ಲೇಔಟ್ನಲ್ಲಿ ಮೇಘಲಾ ಅಂಗಡಿ ಇಟ್ಟುಕೊಂಡಿದ್ದಾರೆ. ಸೆ. 30ರಂದು ರಾತ್ರಿ 7.30ರ ಸುಮಾರಿಗೆ ಸಹಚರರ ಜೊತೆ ಅಂಗಡಿಗೆ ಬಂದಿದ್ದ ಹನೀಫ್, ಸಿಗರೇಟ್ ಪಡೆದು ಸೇದಿದ್ದ. ಹಣ ಕೊಟ್ಟಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಮಹಿಳೆ, ಹಣ ಕೊಡುವಂತೆ ಕೋರಿದ್ದರು’.</p>.<p>‘ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆದಿತ್ತು. ಅಂಗಡಿಯಲ್ಲಿ ಬೊಂಡಾ ಭಜ್ಜಿ ಮಾಡಲು ಕಾಯಿಸಿದ್ದ ಎಣ್ಣೆಯನ್ನೇ ಹನೀಫ್ ಮಹಿಳೆ ಮೇಲೆ ಎರಚಿ ಪರಾರಿಯಾಗಿದ್ದಾನೆ. ಮಹಿಳೆಯ ದೇಹದ ಶೇ 30ರಷ್ಟು ಭಾಗ ಸುಟ್ಟಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿಗರೇಟ್ ಹಣ ಕೇಳಿದರು ಎಂಬ ಕಾರಣಕ್ಕೆ ರೌಡಿ ಹನೀಫ್ ಎಂಬಾತ ಅಂಗಡಿ ಮಾಲೀಕರಾದ ಮೇಘಲಾ (38) ಎಂಬುವರ ಮೇಲೆ ಕಾದ ಎಣ್ಣೆ ಎರಚಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕೃತ್ಯದಿಂದಾಗಿ ಅಮರಜ್ಯೋತಿ ಲೇಔಟ್ ನಿವಾಸಿ ಮೇಘಲಾ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಹನೀಫ್ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಅಮರಜ್ಯೋತಿ ಲೇಔಟ್ನಲ್ಲಿ ಮೇಘಲಾ ಅಂಗಡಿ ಇಟ್ಟುಕೊಂಡಿದ್ದಾರೆ. ಸೆ. 30ರಂದು ರಾತ್ರಿ 7.30ರ ಸುಮಾರಿಗೆ ಸಹಚರರ ಜೊತೆ ಅಂಗಡಿಗೆ ಬಂದಿದ್ದ ಹನೀಫ್, ಸಿಗರೇಟ್ ಪಡೆದು ಸೇದಿದ್ದ. ಹಣ ಕೊಟ್ಟಿರಲಿಲ್ಲ. ಅದನ್ನು ಪ್ರಶ್ನಿಸಿದ್ದ ಮಹಿಳೆ, ಹಣ ಕೊಡುವಂತೆ ಕೋರಿದ್ದರು’.</p>.<p>‘ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆದಿತ್ತು. ಅಂಗಡಿಯಲ್ಲಿ ಬೊಂಡಾ ಭಜ್ಜಿ ಮಾಡಲು ಕಾಯಿಸಿದ್ದ ಎಣ್ಣೆಯನ್ನೇ ಹನೀಫ್ ಮಹಿಳೆ ಮೇಲೆ ಎರಚಿ ಪರಾರಿಯಾಗಿದ್ದಾನೆ. ಮಹಿಳೆಯ ದೇಹದ ಶೇ 30ರಷ್ಟು ಭಾಗ ಸುಟ್ಟಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>