<p><strong>ಬೆಂಗಳೂರು:</strong> ಸಿದ್ಧಾರ್ಥ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ಅವರು ತಮ್ಮ ತಂದೆ ಎಚ್.ಎಂ.ಗಂಗಾಧರಯ್ಯ ಹೆಸರಿನಲ್ಲಿ ನೀಡುವ ‘ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರ ಪ್ರಶಸ್ತಿ’ಗೆ ಕವಿಲಕ್ಷ್ಮೀಪತಿ ಕೋಲಾರ ಆಯ್ಕೆಯಾಗಿದ್ದಾರೆ.</p>.<p>ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರ ಆಯ್ಕೆಗೆಚಲನಚಿತ್ರ ನಿರ್ದೇಶಕ ಎನ್.ಎಸ್.ಶಂಕರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಡಾ.ಲಕ್ಷ್ಮಣ ದಾಸ್, ಡಾ.ರಾಜಪ್ಪ ದಳವಾಯಿ, ಜನಾರ್ದನ (ಜನ್ನಿ), ಶಿವಾಜಿ ಗಣೇಶನ್ ಹಾಗೂ ಗುಡಿಹಳ್ಳಿ ನಾಗರಾಜ್ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.</p>.<p>ಮಾ.1ಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕ ಪ್ರೊ. ಮಾದೇವ್ ಭರಣಿತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿದ್ಧಾರ್ಥ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ಅವರು ತಮ್ಮ ತಂದೆ ಎಚ್.ಎಂ.ಗಂಗಾಧರಯ್ಯ ಹೆಸರಿನಲ್ಲಿ ನೀಡುವ ‘ರಾಷ್ಟ್ರೀಯ ಸಂಸ್ಕೃತಿ ಪುರಸ್ಕಾರ ಪ್ರಶಸ್ತಿ’ಗೆ ಕವಿಲಕ್ಷ್ಮೀಪತಿ ಕೋಲಾರ ಆಯ್ಕೆಯಾಗಿದ್ದಾರೆ.</p>.<p>ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರ ಆಯ್ಕೆಗೆಚಲನಚಿತ್ರ ನಿರ್ದೇಶಕ ಎನ್.ಎಸ್.ಶಂಕರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಡಾ.ಲಕ್ಷ್ಮಣ ದಾಸ್, ಡಾ.ರಾಜಪ್ಪ ದಳವಾಯಿ, ಜನಾರ್ದನ (ಜನ್ನಿ), ಶಿವಾಜಿ ಗಣೇಶನ್ ಹಾಗೂ ಗುಡಿಹಳ್ಳಿ ನಾಗರಾಜ್ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.</p>.<p>ಮಾ.1ಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಸಮಿತಿಯ ಸಂಚಾಲಕ ಪ್ರೊ. ಮಾದೇವ್ ಭರಣಿತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>